Advertisement

ನಾನು ಅಧಿಕಾರದಾಹಿ ಅಲ್ಲ

11:26 PM Aug 25, 2019 | Team Udayavani |

ಬೆಂಗಳೂರು: “ನನಗೆ ಯಾವುದೇ ಅಧಿಕಾರವೂ ಬೇಡ. ಪಕ್ಷದ ವಿಚಾರವಾಗಿ ಹೈಕಮಾಂಡ್‌ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ಬದ್ಧನಾಗಿದ್ದೇನೆ’ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಪಕ್ಷದ ಪ್ರಮುಖ ಹುದ್ದೆ ನೀಡುವ ವಿಚಾರವಾಗಿ ಹೈಕಮಾಂಡ್‌ ತೀರ್ಮಾನ ಮಾಡಲಿದೆ.

Advertisement

ನನಗೆ ಯಾವುದಕ್ಕೂ ಆತುರ ಇಲ್ಲ. ಯಾರಿಗೆ ಅಧಿಕಾರ ಬೇಕು, ಯಾರಿಗೆ ಕಾರು ಬೇಕೋ, ಮನೆ ಬೇಕೋ ತೆಗದುಕೊಳ್ಳಲಿ. ನನಗೆ ಸ್ವಂತ ಮನೆ ಇದೆ. ಸದ್ಯಕ್ಕೆ ಸಾಕು’ ಎಂದರು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಕೇಳಿ ಬರುತ್ತಿರುವ ಬಗ್ಗೆ ಮಾತನಾಡಿ, “ನನಗೆ ಏನೂ ಗೊತ್ತಿಲ್ಲ. ಸೋಮವಾರ ರಾಜ್ಯಕ್ಕೆ ನಮ್ಮ ಪಕ್ಷದ ನಾಯಕರು ಬರುತ್ತಿದ್ದಾರೆ’ ಎಂದರು.

ಸಿದ್ದರಾಮಯ್ಯ ಹಾಗೂ ದೇವೇಗೌಡ ಕುಟುಂಬದ ನಡುವಿನ ಟೀಕೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ, ಕುಮಾರಸ್ವಾಮಿ, ದೇವೇಗೌಡರು ಏನೇನು ಮಾತನಾಡಿ ದ್ದಾರೆ ಎನ್ನುವುದು ಗೊತ್ತಿಲ್ಲ. ಕಳೆದ ಕೆಲವು ದಿನಗಳಿಂದ ಪತ್ರಿಕೆ ಓದಿಲ್ಲ. ಹೀಗಾಗಿ, ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಒಬ್ಬ ಮುಖ್ಯಮಂತ್ರಿ ಕೆಳಗೆ 14 ತಿಂಗಳು ಮಾಡಿದ್ದ ಕೆಲಸಕ್ಕೆ ಬದ್ಧನಾಗಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next