Advertisement

ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ: ಹೊರಟ್ಟಿ

11:31 PM Jun 04, 2019 | Lakshmi GovindaRaj |

ಹುಬ್ಬಳ್ಳಿ: “ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಸಮನ್ವಯ ಸಮಿತಿಯಲ್ಲಿರುವುದು ಸಿಎಲ್‌ಪಿಸಿ ಅಧ್ಯಕ್ಷ ಸಿದ್ದರಾಮಯ್ಯಗೆ ಇಷ್ಟವಿರಲಿಲ್ಲ. ಈ ಕುರಿತು ಎಚ್‌.ಡಿ. ದೇವೇಗೌಡರ ಗಮನಕ್ಕೆ ತಂದರೂ ಸ್ಪಂದಿಸಿಲ್ಲವೆಂಬ ಬೇಸರ ಅವರಿಗಿತ್ತು. ಆದರೆ ವಿಶ್ವನಾಥ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಸರಿಯಲ್ಲ’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, “ನಾನು ಪಕ್ಷದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಅಧ್ಯಕ್ಷ ಸ್ಥಾನ ನಿರ್ವಹಿಸುವ ಶಕ್ತಿ ನನ್ನಲ್ಲಿಲ್ಲ. ಬಂಡೆಪ್ಪ ಖಾಂಶೆಪೂರ ಅಂಥವರು ಆ ಸ್ಥಾನಕ್ಕೆ ಸೂಕ್ತ. ಮೈತ್ರಿ ಸರ್ಕಾರ ರಚನೆ ವೇಳೆ ಕಾಂಗ್ರೆಸ್‌ ಹೇಳಿದಂತೆ ನಡೆದುಕೊಂಡಿಲ್ಲ. ಮೇಲ್ಮನೆ ಸಭಾಪತಿ ಸ್ಥಾನ ಜೆಡಿಎಸ್‌ಗೆ ನೀಡುವುದಾಗಿ ಹೇಳಿದ್ದರು. ಆದರೆ ಅಂತಿಮ ಕ್ಷಣದಲ್ಲಿ ಕಾಂಗ್ರೆಸ್‌ ಸಭಾಪತಿ ಸ್ಥಾನ ಪಡೆಯಿತು’ ಎಂದರು.

ಸಮನ್ವಯ ಸಮಿತಿಯಲ್ಲಿ ಎರಡು ಪಕ್ಷದ ರಾಜ್ಯಾಧ್ಯಕ್ಷರು ಇರಬೇಕಿತ್ತು. ಎಲ್ಲ ಹಂತದಲ್ಲೂ ಸಿದ್ದರಾಮಯ್ಯ ಮೈತ್ರಿ ಸರ್ಕಾರದ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ. ವಿಶ್ವನಾಥ್‌ ಅವರು ಸಿದ್ದರಾಮಯ್ಯ ಧೋರಣೆ ಬಗ್ಗೆ ನನ್ನ ಬಳಿಯೂ ಅಸಮಾಧಾನ ವ್ಯಕ್ತಪಡಿಸಿದ್ದರು. ಸೋಮವಾರ ಕರೆ ಮಾಡಿ ರಾಜೀನಾಮೆ ನೀಡದಂತೆ ಮನವೊಲಿಸಲು ಯತ್ನಿಸಿದ್ದೆ. ಆದರೆ ಅವರು ಸಂಪರ್ಕಕ್ಕೆ ಸಿಗಲಿಲ್ಲ. ಅವರು ಇನ್ನಷ್ಟು ದಿನ ಮುಂದುವರಿಯಬೇಕಿತ್ತು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next