Advertisement

ವಿಶೇಷ ಮಗುವಿನ ತಾಯಿಯಾಗಿ ನಾನು ತಪ್ಪು ಮಾಡಿಲ್ಲ, ತನಿಖೆಗೆ ಸಿದ್ಧ: ಸಚಿವೆ ಜೊಲ್ಲೆ

10:17 AM Aug 15, 2021 | Team Udayavani |

ವಿಜಯಪುರ: ನಾನು ಕೂಡ ಓರ್ವ ವಿಶೇಷ ಮಗನ ತಾಯಿ. ಹೀಗಾಗಿ ಮಕ್ಕಳ ವಿಷಯದಲ್ಲಿ ನಾನು ತಪ್ಪು ಮಾಡಿಲ್ಲ. ನನ್ನ ವಿರುದ್ಧದ ಆರೋಪದ ತನಿಖೆಗೆ ನಾನು ಸಿದ್ಧಳಿದ್ದೇನೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.

Advertisement

ಇದನ್ನೂ ಓದಿ:ಧ್ವಜಾರೋಹಣಕ್ಕೆ ಬಂದ ಸಚಿವೆ ಶಶಿಕಲಾ ಜೊಲ್ಲೆಗೆ ಕಾಂಗ್ರೆಸ್ ಮಹಿಳಾ ಘಕದಿಂದ ಘೇರಾವ್!

ನಗರದಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಸುಸಂಸ್ಕೃತ ಮನೆತನದ ಹಿನ್ನೆಲೆಯಿಂದ ಬಂದಿರುವ ನಾನು ರಾಜಕೀಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಮಹಿಳೆಯರು ರಾಜಕೀಯದಲ್ಲಿ ಇರುವುದೇ ದುಸ್ತರವಾಗಿರುವ ಈ ಹಂತದಲ್ಲಿ ಸಭ್ಯ ರಾಜಕೀಯ ಮಾಡುತ್ತಿರುವ ನಾನು ನನ್ನ ವಿರುದ್ಧದ ರಾಜಕೀಯ ಷಡ್ಯಂತ್ರದಿಂದ ನಡೆದಿರುವ ಆಧಾರ ರಹಿತ ಆರೋಪದ ಕುರಿತು ತನಿಖೆ ಎದುರಿಸಲು ನಾನು ಸಿದ್ಧಳಿದ್ದೇನೆ ಎಂದರು.

ನನ್ನ ವಿರುದ್ಧದ ಷಡ್ಯಂತ್ರದ ಬಳಿಕ ನನಗೆ ಹನ್ನೆರಡನೇ ಶತಮಾನದ ವಚನಕಾರ್ತಿ ಅಕ್ಕಮಹಾದೇವಿ ಅವರ ಬೆಟ್ಟದ ಮೇಲೊಂದು ಮನೆಯ ಮಾಡಿ, ಮೃಗಗಳಿಗೆ ಅಂಜಿದಡೆ ಎಂತಯ್ಯ ವಚನ ಸ್ಮರಣೆಗೆ ಬರುತ್ತದೆ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next