ಮತ್ತೆ ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ ಇದ್ದು, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಂದು ಪ್ರಚಾರ ಮಾಡಿದರೂ ಗೆಲ್ಲುವುದು ನಾನೇ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಎದೆ ತಟ್ಟಿ ಹೇಳಿದರು.
Advertisement
ನಗರದ ಪರಟಿ ನಾಗಲಿಂಗೇಶ್ವರ ಸಮುದಾಯ ಭವನದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಗಣೇಶ ಹುಕ್ಕೇರಿಯನ್ನು ಸೊಲಿಸಲು ಇಲ್ಲಿಯ ಬಿಜೆಪಿ ನಾಯಕರು ನರೇಂದ್ರ ಮೋದಿಯನ್ನು ಕರೆಸಿ ಪ್ರಚಾರ ಮಾಡಿಸಿದರೂ ಬಿಜೆಪಿಗೆ ಹಿನ್ನಡೆಯಾಗಿದೆ ಎಂಬುದು ಬಿಜೆಪಿ ನಾಯಕರಿಗೆ ಗೊತ್ತಿರುವ ವಿಷಯ. ಆದರೂ ಇಲ್ಲಿಯ ಬಿಜೆಪಿ ನಾಯಕರು ಮತ್ತೆ ಮೋದಿ ಅವರನ್ನು ಕರೆಸುತ್ತಿದ್ದಾರೆ. ಇದರಿಂದ ಬಿಜೆಪಿಗೆ ಮತ್ತೆ ಹಿನ್ನಡೆಯಾಗಿ ನನಗೆ ಜಯ ಸಿಗಲಿದೆ ಎಂದರು.
Related Articles
Advertisement
ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ಅನುಕೂಲವಾಗುತ್ತದೆ. ಬೆಳಗಾವಿ ಸಂಸದ ಸುರೇಶ ಅಂಗಡಿ ಮೂರು ಬಾರಿ ಸಂಸದರಾಗಿ ಆಯ್ಕೆಯಾದರೂ ಯಾವುದೇ ಕ್ಷೇತ್ರ ಅಭಿವೃದ್ಧಿ ಮಾಡಿಲ್ಲ, ಅವರು ಸಂಸದರ ಆದರ್ಶ ಗ್ರಾಮವನ್ನು ತಿರುಗಿ ನೊಡಿಲ್ಲ, ನಾನು ಆ ಗ್ರಾಮಕ್ಕೆ 3 ಕೋಟಿ ರೂ. ಅನುದಾನ ಖರ್ಚು ಮಾಡಿದ್ದೇನೆ ಎಂದರು.
ಅಥಣಿ ಶಾಸಕ ಮಹೇಶ ಕುಮಠಳ್ಳಿ ಮಾತನಾಡಿ, ಅಥಣಿ ವಿಧಾನಸಭೆ ಕ್ಷೇತ್ರದಲ್ಲಿ ಜಾರಕಿಹೊಳಿ ಕುಟುಂಬ ಮತ್ತು ಸಂಸದ ಪ್ರಕಾಶ ಹುಕ್ಕೇರಿ ಮಾಡಿರುವ ಅಭಿವೃದ್ಧಿ ಕಾರ್ಯಗಳಿಂದ ನಾನು ಜಯಗಳಿಸಿದ್ದೇನೆ. ಈ ಬಾರಿ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ಕೊಡುವ ಮೂಲಕ ಪ್ರಕಾಶ ಹುಕ್ಕೇರಿಗೆ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದರು.
ಖಾನಾಪುರ ಶಾಸಕಿ ಅಂಜಲಿ ನಿಂಬಾಳಕರ, ನಿಪ್ಪಾಣಿ ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಕುಡಚಿ ಮಾಜಿ ಶಾಸಕ ಎಸ್.ಬಿ.ಘಾಟಗೆ, ವೀರಕುಮಾರ ಪಾಟೀಲ, ಹುಕ್ಕೇರಿ ಮಾಜಿ ಶಾಸಕ ಎ.ಬಿ.ಪಾಟೀಲ ಮಾತನಾಡಿದರು.
ವೇದಿಕೆಯ ಮೇಲೆ ಶಾಸಕ ಗಣೇಶ ಹುಕ್ಕೇರಿ, ಜಿ.ಪಂ ಅಧ್ಯಕ್ಷ ಆಶಾ ಐಹೊಳೆ, ಕಿರಣ ಪಾಟೀಲ, ಈರಗೌಡ ಪಾಟೀಲ, ಸುಭಾಸಗೌಡ ಪಾಟೀಲ, ಮಹಾವೀರ ಮೋಹಿತೆ, ಮಲ್ಲಿಕಾರ್ಜುನ ಪಾಟೀಲ, ತಾಪಂ ಸದಸ್ಯ ವಿರೇಂದ್ರ ಪಾಟೀಲ, ಸತೀಶ ಕಲಕರ್ಣಿ, ಪ್ರಭಾಕರ ಈ. ಕೋರೆ, ಅನೀಲ ಪಾಟೀಲ, ಸಾಭೀರ ಜಮಾದಾರ, ಸತೀಶ ಪಾಟೀಲ, ಮುದ್ದಸರ ಜಮಾದಾರ, ಸುರೇಶ ಬಾಡಕರ, ಸುರೇಶ ಕೋರೆ, ಶಾಮ ರೇವಡೆ, ಎಂ.ಆರ್.ಮುನ್ನೋಳ್ಳಿಕರ, ಮಲಗೌಡ ನೇರ್ಲಿ, ಸಿದ್ದಪ್ಪ ಮರ್ಯಾಯಿ, .ಎಚ್.ಪಟೇಲ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಮೋದಿ ಅಲೆ ಇಲ್ಲರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ನಡೆಯುವುದಿಲ್ಲ, ಹೀಗಾಗಿ ಅಭಿವೃದ್ಧಿ ಮಾಡಿರುವ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸುತ್ತಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೂಡಾ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸುವುದು ನಿಶ್ಚಿತವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಹಳ್ಳಿಗಳಿಗೆ ತೆರಳಿ ಸರ್ಕಾರದ ಸಾಧನೆ ಮತ್ತು ಪ್ರಕಾಶ ಹುಕ್ಕೇರಿ ಮಾಡಿರುವ ಸಾಧನೆ ತಿಳಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ಕೊಡಲು ಮುಂದಾಗಬೇಕು. ಮುಖಂಡರು ಕೂಡಾ ಮೈಮರೆಯದೇ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು.
ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವರು ಬೆಳಗಾವಿ