Advertisement

ಐಎಂಎ ಪ್ರಕರಣ: ಅನುಸೂಚನೆ ಹೊರಡಿಸಲು ಕೇಂದ್ರಕ್ಕೆ ಹೈ ನಿರ್ದೇಶನ

10:53 PM Aug 28, 2019 | Team Udayavani |

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಬಗ್ಗೆ ಶೀಘ್ರ ಅಧಿಸೂಚನೆ ಹೊರಡಿಸುವಂತೆ ಹೈಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಬುಧವಾರ ನಿರ್ದೇಶನ ನೀಡಿದೆ. ಈ ಕುರಿತು ಸಲ್ಲಿಸಲಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾ.ಎ.ಎಸ್‌. ಓಕಾ ಹಾಗೂ ನ್ಯಾ. ಮೊಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿದ್ದವು.

Advertisement

ಈ ವೇಳೆ, ಪ್ರಕರಣದ ತನಿಖೆ ಯನ್ನು ಸಿಬಿಐ ಆರಂಭಿಸಿದೆಯೇ ಎಂದು ನ್ಯಾಯಪೀಠ ಪ್ರಶ್ನಿಸಿತು. ಆಗ, ಸಿಬಿಐ ಪರ ವಕೀಲ ಪ್ರಸನ್ನಕುಮಾರ್‌, ಇಲ್ಲ, ಈವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ. ಹಾಗಾಗಿ, ಸಿಬಿಐ ವಿಚಾರಣೆ ಆರಂಭಿಸಿಲ್ಲ ಎಂದು ತಿಳಿಸಿದರು. ಅದಕ್ಕೆ, ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದಿರುವುದು ತನಿಖೆಯ ವಿಳಂಬಕ್ಕೆ ಕಾರಣ ಆಗುವುದು ಸಮಂಜಸವಲ್ಲ.

ಆದ್ದರಿಂದ ಆದಷ್ಟು ಶೀಘ್ರ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿತು. ದೇ ರೀತಿ ಎಸ್‌ಐಟಿ ವಶಪಡಿಸಿಕೊಂಡಿರುವ ಐಎಂಎ ಸಂಸ್ಥೆಗೆ ಸೇರಿದ ಚಿನ್ನದ್ದು ಎನ್ನಲಾಗುತ್ತಿರುವ ಬಿಸ್ಕತ್‌ಗಳ ಸಾಚಾತನದ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಸೆ.13ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next