Advertisement

ಐಎಂಎ ವಂಚನೆ ಪ್ರಕರಣ: ಉಮರ್‌ ಷರೀಫ್ ಬಂಧನ

08:43 AM Jul 19, 2019 | Sriram |

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಅಧಿಕಾರಿಗಳು ಗುರುವಾರ ಮತ್ತೂಬ್ಬ ಮೌಲ್ವಿಯನ್ನು ಬಂಧಿಸಿದ್ದಾರೆ.

Advertisement

ಬನ್ನೇರುಘಟ್ಟ ನಿವಾಸಿ ಉಮರ್‌ ಷರೀಫ್(42) ಬಂಧಿತ ಮೌಲ್ವಿ. ಆರೋಪಿ ವಂಚಕ ಸಂಸ್ಥೆ ಪರವಾಗಿ ಪ್ರಚಾರ ಮಾಡುತ್ತಿದ್ದ. ಈತನ ಮಾತು ನಂಬಿ ಸಾವಿರಾರು ಮಂದಿ ಹಣ ಹೂಡಿಕೆ ಮಾಡಿ ವಂಚನೆಗೊಳ್ಳಗಾಗಿದ್ದರು. ಈ ಮಾಹಿತಿಯನ್ನಾಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಜುಲೈ 22ರವರೆಗೆ ಪೊಲೀಸ್‌ ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಐಟಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next