Advertisement

ಐಎಂಎ; ಆರೋಪಿ ಬಂಧನಕ್ಕೆ ಲುಕ್‌ಔಟ್‌ ನೋಟಿಸ್‌ ಜಾರಿ

07:09 AM Jun 29, 2019 | Lakshmi GovindaRaj |

ವಿಜಯಪುರ: ಐಎಂಎ ಬಹುಕೋಟಿ ರೂ.ವಂಚನೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪಿ ಮಹ್ಮದ್‌ ಮನ್ಸೂರ ಖಾನ್‌ ಬಂಧನಕ್ಕೆ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿದೆ. ಮತ್ತೂಂದೆಡೆ, ಪ್ರಕರಣದ ಕುರಿತು ಎಸ್‌ಐಟಿ ನಡೆಸಿರುವ ತನಿಖೆಯೂ ಚುರುಕಾಗಿ ನಡೆದಿದೆ ಎಂದು ಗೃಹ ಸಚಿವ ಡಾ| ಎಂ.ಬಿ.ಪಾಟೀಲ ಹೇಳಿದ್ದಾರೆ.

Advertisement

ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಕಳೆದ ಎರಡು ದಿನಗಳ ಹಿಂದಷ್ಟೇ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿ, ಪರಿಶೀಲನೆ ಮಾಡಿದ್ದೇನೆ. ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ನಾನು ಕೂಡ ವಿಶೇಷ ಆಸಕ್ತಿ ವಹಿಸಿದ್ದೇನೆ. ಇದಕ್ಕಾಗಿ ನಮ್ಮ ಸರ್ಕಾರ ವಿವಿಧ ಆಯಾಮಗಳಲ್ಲಿ ನಡೆಸಿರುವ ಕೆಲಸಗಳ ಕುರಿತು ಸಾರ್ವಜನಿಕರಿಗೂ ಗೊತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next