Advertisement

ಭಾರತಕ್ಕೆ ಬಂದ ಐಎಂಎ ವಂಚಕ ಮನ್ಸೂರ್‌ ಖಾನ್‌ ಇಡಿ ವಶಕ್ಕೆ

09:24 AM Jul 21, 2019 | keerthan |

ಹೊಸದೆಹಲಿ: ದೇಶ ಬಿಟ್ಟು ಪರಾರಿಯಾಗಿದ್ದ ಬಹುಕೋಟಿ ಐಎಂಎ ಜ್ಯುವೆಲ್ಲರಿ ವಂಚಕ ಮನ್ಸೂರ್‌ ಖಾನ್‌ ರಾತ್ರೋರಾತ್ರಿ ಭಾರತಕ್ಕೆ ಮರಳಿದ್ದಾನೆ.

Advertisement

ಶುಕ್ರವಾರ ಬೆಳಗಿನ ಜಾವ ಮೂರು ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮನ್ಸೂರ್‌ ನನ್ನು ಎಸ್‌ ಐಟಿ ಮತ್ತು ಇಡಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಬೆಂಗಳೂರಿನ ಐಎಂಎ ಜ್ಯುವೆಲ್ಲರಿ ಮಾಲಕನಾಗಿದ್ದ ಮೊಹಮ್ಮದ್‌ ಮನ್ಸೂರ್‌ ಖಾನ್ ಸಾವಿರಾರು ಜನರಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ.

ಸದ್ಯ ಮನ್ಸೂನ್‌ ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಿದ್ದಾರೆ.  ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿ ಎಂಟಿಎನ್‌ ಎಲ್‌ ಕಟ್ಟಡಕ್ಕೆ ಕರೆದೊಯ್ಯಲಾಗಿದೆ.

ತಿಂಗಳ ಹಿಂದೆ ವಿದೇಶಕ್ಕೆ ಪರಾರಿಯಾಗಿದ್ದ ಮನ್ಸೂನ್‌, ನಂತರ ವಿಡಿಯೋ ಮೂಲಕ ತನಗಿರುವ ಜೀವ ಬೆದರಿಕೆ, ತಾನು ಭಾರತಕ್ಕೆ ಬಂದರೆ ನನಗೆ ಜೀವ ಭಯವಿದೆ ಎಂದು ಹೇಳಿಕೆ ನೀಡಿದ್ದ.

Advertisement

ಜುಲೈ 15ರಂದು ಮತ್ತೊಂದು ವಿಡಿಯೋ ಮಾಡಿದ್ದ ಖಾನ್‌, “ನನಗೆ ಅನಾರೋಗ್ಯ ಕಾಡುತ್ತಿದೆ. ಹೃದಯ ಸಂಬಂಧಿ ಅನಾರೋಗ್ಯವಿದೆ. ಹಾಗಾಗಿ ನಾನು ಭಾರತಕ್ಕೆ ಬರುತ್ತಿದ್ದು ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ನಂಬಿಕೆಯಿದೆ” ಎಂದಿದ್ದ.

Advertisement

Udayavani is now on Telegram. Click here to join our channel and stay updated with the latest news.

Next