Advertisement

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

05:00 PM Oct 17, 2021 | Team Udayavani |

ಹೊಸದಿಲ್ಲಿ : ಉತ್ತರಾಖಂಡದಲ್ಲಿ ಅಕ್ಟೋಬರ್ 18 ರಿಂದ ಭಾರೀ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಅಲರ್ಟ್ ಘೋಷಿಸಿದೆ

Advertisement

ಅಕ್ಟೋಬರ್ 18 ಕ್ಕೆ ಭಾರೀ ಮಳೆಯಾಗಲಿದೆ, ಅ. 17-19ರಂದು ರೆಡ್ ಅಲರ್ಟ್ ಘೋಷಿಸಿದೆ ಮತ್ತು ರಾಜ್ಯ ಸರಕಾರವು ಎಚ್ಚರದಿಂದಿರಬೇಕು, ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ ಮಾಡಬೇಕೆಂದು ಐಎಂಡಿ ಒತ್ತಾಯಿಸಿದೆ.

ಈಗಾಗಲೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ಚಾರ್ ಧಾಮ್ ಯಾತ್ರಾ ರಸ್ತೆಯಲ್ಲಿ ವಿಶೇಷ ಕಾಳಜಿ ವಹಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಪೊಲೀಸರು , ಎಸ್ ಡಿಆರ್ ಎಫ್ ಪಡೆಗಳು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

ಕೇರಳದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಈಗಾಗಲೇ 10 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next