Advertisement

ಕೇಂದ್ರದಿಂದ ಶೀಘ್ರವೇ ನೆರೆ ಪರಿಹಾರ: ಸಿಎಂ

11:12 PM Sep 10, 2019 | Team Udayavani |

ಹುಬ್ಬಳ್ಳಿ: ಕೇಂದ್ರದಿಂದ ಇದುವರೆಗೂ ನೆರೆ ಪರಿಹಾರದ ಹಣ ಬಂದಿಲ್ಲ. ಸದ್ಯದಲ್ಲಿಯೇ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ನೆರೆಪೀಡಿತ ಪ್ರದೇಶಗಳಿಗೆ ಕೇಂದ್ರದ ಅಧ್ಯಯನ ತಂಡ ಭೇಟಿ ನೀಡಿದೆ.

Advertisement

ಗೃಹ ಸಚಿವ ಅಮಿತ್‌ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿ ವೀಕ್ಷಣೆ ಮಾಡಿ ಪರಿಶೀಲಿಸಿದ್ದಾರೆ. ಶೀಘ್ರವೇ ಕೇಂದ್ರದ ನೆರವು ಬರಲಿದೆ. ನೆರೆಪೀಡಿತ ಪ್ರದೇಶಗಳಲ್ಲಿ ರಸ್ತೆ, ಸೇತುವೆ ನಿರ್ಮಾಣ ಸೇರಿದಂತೆ ಇನ್ನಿತರ ಕಾರ್ಯ ಕೈಗೊಳ್ಳಲಾಗುತ್ತಿದೆ. ಅದಕ್ಕಾಗಿ ಬೇರೆ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಿ ನೆರೆ ಪರಿಹಾರಕ್ಕೆ ಹೆಚ್ಚಿನ ಹಣ ನೀಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಶಾಸಕ ಉಮೇಶ ಕತ್ತಿಯವರು ವೈಯಕ್ತಿಕ ಕಾರಣದಿಂದ ಬೆಂಗಳೂರಿನಲ್ಲಿದ್ದಾರೆ. ಅವರು ನನ್ನೊಂದಿಗೆ ಫೋನ್‌ನಲ್ಲಿ ಮಾತನಾಡಿ ಬುಧವಾರ ಬೆಳಗ್ಗೆ ಮನೆಗೆ ಬಂದು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.
-ಬಿ.ಎಸ್‌.ಯಡಿಯೂರಪ್ಪ, ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next