Advertisement

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

08:38 PM May 17, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದರಿಂದ ಜನರ ಮೇಲೆ ಕಾಂಗ್ರೆಸ್‌ ಮೇಲಿನ ವಿಶ್ವಾಸ ಹೆಚ್ಚಿದೆ. ಇದು ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಭಾವ ಬೀರುತ್ತಿದ್ದು ಉತ್ತರ ಪ್ರದೇಶದಲ್ಲೇ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ “ಇಂಡಿಯಾ’ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

Advertisement

ವಿಧಾನಸೌಧದ ಆವರಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಅಂತ ಚುನಾವಣೆ ಪ್ರಚಾರದ ಉದ್ದಕ್ಕೂ ಜನರಿಗೆ ವಿವರಿಸಿದ್ದೇವೆ. ಜನ ನಮ್ಮ ಯೋಜನೆಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ. ಅಧಿಕಾರಕ್ಕೆ ಬರುತ್ತಿದ್ದಂತೆ ಇವೆಲ್ಲವೂ ಜಾರಿಗೆ ಬರಲಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next