Advertisement

Education: ಶೈಕ್ಷಣಿಕ ಫ‌ಲಿತಾಂಶ ಕುಂಠಿತ: ಚಿಂತನೆ ಅಗತ್ಯ

11:48 PM Sep 05, 2023 | Team Udayavani |

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವಿದ್ಯಾರ್ಥಿಗಳು ಉತ್ತಮ ಫ‌ಲಿತಾಂಶ ಪಡೆಯುತ್ತಾರೆ. ಆದರೆ ಕಲ್ಯಾಣ ಕರ್ನಾಟಕದಲ್ಲಿ ಅಷ್ಟೊಂದು ಉತ್ತಮ ಫ‌ಲಿತಾಂಶ ಬರುತ್ತಿಲ್ಲ. ಈ ಬಗ್ಗೆ ಚಿಂತನ ಮಂಥನ ನಡೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯಿಂದ ಭಾರತ ರತ್ನ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮ ದಿನದ ಅಂಗವಾಗಿ ಮಂಗಳವಾರ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, 43 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಮತ್ತು ನ್ಯಾಕ್‌ನಲ್ಲಿ ಉತ್ತಮ ಸಾಧನೆ ಮಾಡಿದ ಸರಕಾರಿ ಕಾಲೇಜುಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.

ಶಿಕ್ಷಣ ಸಚಿವ ಎಸ್‌. ಮಧು ಬಂಗಾರಪ್ಪ ಮಾತನಾಡಿ, 13 ಸಾವಿರ ಶಿಕ್ಷಕರ ನೇಮಕ ಪ್ರಕರಣ ಇತ್ಯರ್ಥಗೊಳಿಸಲು ಇಲಾಖೆಯು ಶ್ರಮಿಸುತ್ತಿದೆ. ಈ ವರ್ಷ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿದ್ದೇವೆ ಎಂದು ಹೇಳಿದರು. ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್‌ ಇದ್ದರು.

ಕರಾವಳಿಯಲ್ಲೇಕೆ ಉತ್ತಮ ಫ‌ಲಿತಾಂಶ?-ವಿಮರ್ಶಿಸಿ
ದ.ಕ. ಮತ್ತು ಉಡುಪಿಯಲ್ಲಿ ಪಾಠ ಮಾಡುವ ಶಿಕ್ಷಕರು ಸಹ ಕಲ್ಯಾಣ ಕರ್ನಾಟಕದಲ್ಲಿನ ಶಿಕ್ಷಕರ ರೀತಿಯಲ್ಲೇ ಟಿಸಿಎಚ್‌, ಬಿಎಡ್‌, ಎಂಎಡ್‌ ಓದಿ ಬಂದಿರುತ್ತಾರೆ. ಆದರೆ ಅಲ್ಲಿ ಉತ್ತಮ ಫ‌ಲಿತಾಂಶ ಬರುತ್ತದೆ. ಕರಾವಳಿ ಭಾಗದಲ್ಲಿ ಕ್ರಿಶ್ಚಿಯನ್‌ ಮಿಷನರಿಗಳು ಸ್ವಾತಂತ್ರ್ಯ ಪೂರ್ವದಿಂದಲೂ ಇರುವುದೂ ಇದಕ್ಕೆ ಕಾರಣವಾಗಿರಬಹುದು. ಆದರೂ ಈ ಬಗ್ಗೆ ವಿಚಾರ ವಿಮರ್ಶೆ ನಡೆಯುವ ಅಗತ್ಯವಿದೆ ಎಂದು ಸಿಎಂ ಹೇಳಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next