Advertisement

ಪರೇಶ್‌ ಸಾವಿನ ನಿಷ್ಪಕ್ಷಪಾತ ತನಿಖೆಯಾಗಲಿ :ಕಾಗೇರಿ

04:13 PM Dec 09, 2017 | Team Udayavani |

ಹೊನ್ನಾವರ: ಶೆಟ್ಟಿಕೆರೆಯಲ್ಲಿ ಹೆಣವಾಗಿ ಕಂಡು ಬಂದಿರುವ ಪರೇಶ್‌ ಮೇಸ್ತನ ನಿಗೂಢ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ವಿಶ್ವೇಶ್ವರ ಹೆಗಡೆ ಕಾಗೇರಿ ಸರಕಾರವನ್ನು ಒತ್ತಾಯಿಸಿದ್ದಾರೆ.

Advertisement

ಪರೇಶ್‌ನ ಪಾಲಕರಿಗೆ ಸಾಂತ್ವನ ಹೇಳಿದ ಅವರು, ಮಾಧ್ಯಮಗಳ ಜೊತೆ ಮಾತನಾಡಿ, ಮೇಲ್ನೋಟಕ್ಕೆ ಆಕಸ್ಮಿಕ ಎನಿಸಿದರು ಇದೊಂದು ವ್ಯವಸ್ಥಿತ ಹತ್ಯೆ ಆಗಿರುವ ಶಂಕೆಯಿದೆ. ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ದೂರಿದರು.

ಅಂದು ಗಲಭೆ ಆರಂಭಿಸಿದವರನ್ನು ತಕ್ಷಣ ಬಂಧಿಸಿ, ಅವರ ಬಳಿಯಿದ್ದ ಮಾರಕಾಸ್ತ್ರಗಳನ್ನು ಮುಟ್ಟಗೋಲು ಹಾಕಿಕೊಳ್ಳುವುದನ್ನು ಬಿಟ್ಟು ಪೊಲೀಸರು ಹಿಂದುಗಳ ಮೇಲೆ ಲಾಠಿಚಾರ್ಜ್‌ ಮಾಡಿರುವ ಹಾಗೂ ಹಿಂದುಗಳನ್ನು ಬಂಧಿಸಿರುವ ಕ್ರಮ ಖಂಡನೀಯ.

ಮಾಜಿ ಸಚಿವ ಶಿವಾನಂದ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ಹಣಜಿಬೈಲ್‌, ಮುಖಂಡ ಸೂರಜ್‌ ನಾಯ್ಕ ಸೋನಿ, ರೂಪಾಲಿ ನಾಯ್ಕ ಕಾರವಾರ, ದಿನಕರ ಶೆಟ್ಟಿ ಕುಮಟಾ, ಸುನೀಲ್‌ ನಾಯ್ಕ ಭಟ್ಕಳ, ವೆಂಕಟ್ರಮಣ
ಹೆಗಡೆ, ಬಿಜೆಪಿ ತಾಲೂಕಾಧ್ಯಕ್ಷ ಸುಬ್ರಾಯ ನಾಯ್ಕ ಮತ್ತಿತರರು ಜೊತೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next