Advertisement

ಸೆ.6ರಂದು ಸರ್ಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ಸೇವೆ ಯೋಜನೆ ಜಾರಿ

09:17 PM Sep 04, 2022 | Team Udayavani |

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ನೌಕರರ ಮತ್ತವರ ಕುಟುಂಬದವರಿಗೆ ನಗದು ರಹಿತ ಆರೋಗ್ಯ ಸೇವೆ ಯೋಜನೆಯನ್ನು ಸೆ.6ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

Advertisement

ಕಳೆದ ಮೂರು ದಶಕಗಳಿಂದ ಗಂಭೀರ ಕಾಯಿಲೆ, ಅಪಘಾತ, ಅನಾರೋಗ್ಯಕ್ಕೆ ತುತ್ತಾದ ಸಂದರ್ಭದಲ್ಲಿ ಸರ್ಕಾರಿ ನೌಕರರು ಮತ್ತವರ ಅವಲಂಬಿತರಿಗೆ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ನೀಡಬೇಕೆಂದು ಹೋರಾಟಗಳು ನಿರಾಂತರವಾಗಿ ನಡೆಯುತ್ತಾ ಬಂದಿದೆ. ಇದೀಗ ಆರ್ಥಿಕ ಇಲಾಖೆಯ ಒಪ್ಪಿಗೆಯೊಂದಿಗೆ ಯೋಜನೆ ರಾಜ್ಯಾದ್ಯಂತ ಜಾರಿಯಾಗಲಿದೆ.

ಸರ್ಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ಸೇವೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಮಂಡಿಸಿದ್ದರು. ಈ ಯೋಜನೆಯಡಿ ಸರ್ಕಾರದ ವಿವಿಧ ಇಲಾಖೆಯಲ್ಲಿ ಕಾರ್ಯಾಚರಿಸುತ್ತಿರುವ 40 ಲಕ್ಷ ಉದ್ಯೋಗಿಗಳು ಮತ್ತವರ ಕುಟುಂಬಕ್ಕೆ ಸಂಪೂರ್ಣ ಉಚಿತ ಚಿಕಿತ್ಸೆ ಲಭ್ಯವಾಗಲಿದೆ.

ಇದಕ್ಕಾಗಿ 1300 ಕೋಟಿ ರೂ.ವನ್ನು ಬಜೆಟ್‌ನಲ್ಲಿ ಇಡಲಾಗಿದೆ. ಸರ್ಕಾರದಿಂದ ವಿಮಾ ಕಾರ್ಡ್‌ ವಿತರಿಸಲಾಗುತ್ತದೆ. ಜತೆಗೆ ನಗದು ರಹಿತ ಚಿಕಿತ್ಸೆಗಾಗಿ ಸರ್ಕಾರಿ ನೌಕರರ ವಾರ್ಷಿಕವಾಗಿ ದೇಣಿಗೆ ಪಾವತಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next