Advertisement

ಫ‌ಸಲ್‌ ಬೀಮಾ ಯೋಜನೆ ಅನುಷ್ಠಾನಗೊಳಿಸಲು ಸೂಚನೆ

12:05 PM May 29, 2020 | Suhan S |

ಬೆಳಗಾವಿ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಬೀಮಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರ ಜೊತೆಗೆ ರೈತರು ಸ್ವಯಂ ಪ್ರೇರಣೆಯಿಂದ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ವಿಧಾನ ಪರಿಷತ್‌ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಇಲ್ಲಿನ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ವಿಮೆಯ ಅನುಷ್ಠಾನದಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಮಾಹಿತಿ ಪಡೆದು 2019-20ನೇ ಸಾಲಿನ ಬೆಳೆವಿಮೆ ಮಾಡಿಸಿದ ರೈತರ ಖಾತೆಗೆ ಜಮೆ ಆದ ವಿಮಾ ಮೊತ್ತ ಹಾಗೂ ಆಗುತ್ತಿರುವ ಅಡೆತಡೆಗಳ ಬಗ್ಗೆ ಅವಲೋಕನ ನಡೆಸಿದರು.

ವಿಮೆ ಮೊತ್ತವನ್ನು ಆದಷ್ಟು ಶೀಘ್ರ ರೈತರಿಗೆ ದೊರಕಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಯೋಜನೆಯಲ್ಲಿ ರೈತರು ಸ್ವಪ್ರೇರಣೆಯಿಂದ ಭಾಗವಹಿಸುವಂತೆ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಲಾನಿ ಮೊಕಾಸಿ, ಉಪನಿರ್ದೇಶಕ ಎಚ್‌.ಡಿ. ಕೊಳೇಕರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next