Advertisement

KKRTC; ಕಲ್ಯಾಣ ಕರ್ನಾಟಕ ಸಾರಿಗೆ ಸಿಬ್ಬಂದಿಗೆ ಪ್ರೀಮಿಯಂ ರಹಿತ ವಿಮಾ ಯೋಜನೆ ಜಾರಿ

01:39 PM Dec 21, 2023 | Team Udayavani |

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಪ್ರೀಮಿಯಂ ರಹಿತ ರೂ.1.20 ಕೋಟಿ ಅಪಘಾತ ಪರಿಹಾರ‌ ವಿಮಾ ಯೋಜನೆ ಜಾರಿಗೊಳಿಸಲಾಗಿದೆ.

Advertisement

ಪ್ರೀಮಿಯಂ ರಹಿತ ರೂ.1.20 ಕೋಟಿ ವಿಮಾ ಯೋಜನೆಗೆ ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಉಪಸ್ಥಿತಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ, ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ವಲಯ ಮುಖ್ಯಸ್ಥ ನವನೀತ್ ಕುಮಾರ್ ರವರೊಂದಿಗೆ ಒಡಂಬಡಿಕೆ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಾರಿಗೆ ನಿಗಮದ ಸಿಬ್ಬಂದಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗಿ ಆಗುತ್ತಿರುವ ಸಾವು-ನೋವಿನ ಪ್ರಮಾಣ ಗಮನಿಸಿ, ನಿಗಮವು ನೌಕರರು ವೈಯಕ್ತಿಕ / ಕರ್ತವ್ಯ ನಿರತ ಸಮಯದಲ್ಲಿ ಅಪಘಾತದಿಂದಾಗಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗಳಿಗೆ ಗಣನೀಯ ಮೊತ್ತದಷ್ಟು ಹಣ ದೊರೆಯುವಂತೆ ಮಾಡುವ ಉದ್ದೇಶದಿಂದ ಯೂನಿಯನ್ ಬ್ಯಾಕ್ ಆಫ್ ಇಂಡಿಯಾ ರವರೊಂದಿಗೆ Union Super Salary Account (USSA) ಯೋಜನೆಯ ಸೌಲಭ್ಯ ನೀಡಲು ಒಪ್ಪಂದ ಮಾಡಿಕೊಂಡಿದೆ. ಪ್ರೀಮಿಯಂ ರಹಿತವಾಗಿ ಈ ಯೋಜನೆಯನ್ನು ಜಾರಿಗೊಳಿಸಲು ಸಹಕರರಿಸಿದ ಯೂನಿಯನ್ ಬ್ಯಾಂಕ್ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

ಸದರಿ ಯೋಜನೆಯಡಿ ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನೌಕರರು ಅಪಫಾತದಲ್ಲಿ ನಿಧನರಾದಲ್ಲಿ ಅಂತಹ ನೌಕರರ ಅವಲಂಬಿತರಿಗೆ ರೂ.1.20 ಕೋಟಿಯ ಅಪಘಾತ ವಿಮೆ ಹಣ ದೊರಕಲಿದೆ.

ನೌಕರರು ಶಾಶ್ವತ ಅಂಗನ್ಯೂನ್ಯತೆ / ಭಾಗಶಃ ಶಾಶ್ವತ ಅಂಗನ್ಯೂನ್ಯತೆ ಒಳಗಾದಲ್ಲಿ ರೂ.1 ಕೋಟಿಗಳನ್ನು ಪಡೆಯಬಹುದಾಗಿದ್ದು, ಡೆಬಿಟ್ ಕಾರ್ಡ ಮೇಲೆ ರೂ.15 ಲಕ್ಷಗಳ ಅಪಘಾತ ವಿಮಾ ಸೌಲಭ್ಯವನ್ನು ಜಾರಿ ಮಾಡಲಾಗಿರುತ್ತದೆ. ಯೋಜನೆಯಡಿ ಅಪಘಾತವಲ್ಲದ ಸ್ವಾಭಾವಿಕ ಮರಣಕ್ಕೆ ರೂ.5 ಲಕ್ಷಗಳು ವಿಮೆದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯಗಳನ್ನು ನೀಡಲಾಗುತ್ತಿದೆ.

Advertisement

ದೇಶದ ಸಾರಿಗೆ ನಿಗಮಗಳಲ್ಲಿ ಮೊದಲ ಬಾರಿಗೆ ರೂ.1.20 ಕೋಟಿಗಳ ಅಪಘಾತ ವಿಮೆ ಸಾರಿಗೆ ನೌಕರರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾರಿಗೆ ತರಲಾಗಿದೆ.

ಈ ಸಂದರ್ಭದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಎಸ್. ಭರತ್ ಡಾ. ಕೆ. ನಂದಿನಿ ದೇವಿ ಭಾಆಸೇ, ನಿರ್ದೇಶಕರು (ಸಿ&ಜಾ), ಕೆಎಸ್ ಆರ್ ಟಿ ಸಿ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪರವಾಗಿ ವೆಂಕಟ್ ಸುದೀರ ಚೀದೆಲ್ಲ, ಪ್ರಾದೇಶಿಕ ಮುಖ್ಯಸ್ಥರು ಕಲಬುರಗಿ ಹಾಗೂ ಶ್ರೀ ನಾಗಭೂಷಣ. ಜಿ.ಆರ್. ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸಿ.ಆರ್.ಸಿ. ಬೆಂಗಳೂರು, ಶ್ರೀ,ನಾಗರಾಜ್ ದೇಶನೂರು, ಮುಖ್ಯ ವ್ಯವಸ್ಥಾಪಕರು ಸಿ.ಆರ್.ಸಿ. ಬೆಂಗಳೂರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next