Advertisement

ಸರಕಾರಿ ನೌಕರರಿಗೆ OPS ಜಾರಿ ಚುನಾವಣೆ ಗಿಮಿಕ್‌: ಕುಮಾರಸ್ವಾಮಿ

09:19 PM Jan 25, 2024 | Team Udayavani |

ಬೆಂಗಳೂರು: ಸುಪ್ರೀಂಕೋರ್ಟ್‌ ಆದೇಶಿಸಿದ್ದರೂ ರಾಜ್ಯ ಕಾಂಗ್ರೆಸ್‌ ಸರಕಾರ ಹಳೆ ಪಿಂಚಣಿ ಯೋಜನೆ (ಒಪಿಎಸ್‌)ಯನ್ನು ತನ್ನ ರಾಜಕೀಯ ಹಿತಾಸಕ್ತಿಗೆ ಅನುಗುಣವಾಗಿ ಪರಿವರ್ತಿಸಿ ಸರಕಾರಿ ನೌಕರರಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

Advertisement

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯ ಸರಕಾರ ಮಕ್ಮಲ್‌ ಟೋಪಿ ಹಾಕುವ ತನ್ನ ಚಾಳಿಯನ್ನು ಮುಂದುವರಿಸಿದೆ. ಸುಪ್ರಿಂಕೋರ್ಟ್‌ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ ಬಗ್ಗೆ ಅರೆಬರೆಯಾಗಿ ತರಾತುರಿಯ ಆದೇಶ ಹೊರಡಿಸಿದೆಯೇ ಹೊರತು, ಅದಕ್ಕೆ ಸರಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಹರಿದಿಲ್ಲ ಎಂದು ಟೀಕಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಚುನಾವಣ ಫ‌ಸಲು ತೆಗೆಯಲು 10 ತಿಂಗಳು ಹೊಂಚು ಹಾಕಿ ಕುಳಿತರು. ಇದು ಚುನಾವಣೆ ಗಿಮಿಕ್‌ ಅಷ್ಟೇ, ಅನುಮಾನವೇ ಇಲ್ಲ ಎಂದು ಕುಮಾರಸ್ವಾಮಿ ಕಟುವಾಗಿ ಟೀಕಿಸಿ¨ªಾರೆ.

Advertisement

Udayavani is now on Telegram. Click here to join our channel and stay updated with the latest news.

Next