Advertisement

ಪಾಲಿಕೆ ಆಯುಕ್ತರಿಂದ ಪ್ರಮುಖ ರಸ್ತೆಗಳ ಪರಿಶೀಲನೆ

12:50 AM May 04, 2019 | Team Udayavani |

ಬೆಂಗಳೂರು: ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬಿದ್ದ ಬಗ್ಗೆ ಸಂಚಾರ ಪೊಲೀಸರು ಫೋಟೋ ಸಹಿತ ನೀಡಿದ್ದ ವರದಿ ಆಧರಿಸಿ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಶುಕ್ರವಾರ ನಗರ ಪ್ರದಕ್ಷಿಣೆ ನಡೆಸಿದರು.

Advertisement

ವರದಿಯಲ್ಲಿರುವ ಸ್ಥಳಗಳಿಗೆ ಭೇಟಿ ನೀಡಿದಾಗ ಬಹುತೇಕ ಕಡೆಗಳಲ್ಲಿ ಗುಂಡಿ ಮುಚ್ಚಿರುವುದು ಕಂಡುಬಂತು. ಸಂಚಾರ ಪೊಲೀಸರು ಇನ್‌ಫೆಂಟ್ರಿರಸ್ತೆ, ಕ್ವೀನ್ಸ್‌ ರಸ್ತೆ, ಬಾಳೇಕುಂದ್ರಿ ಜಂಕ್ಷನ್‌, ವಿವಿ ಟವರ್‌, ಕಾಫಿ ಬೋರ್ಡ್‌, ಶಿವಾಜಿನಗರ, ಶಾಂತಿನಗರ, ಎಂ.ಜಿ.ರಸ್ತೆ ಸೇರಿದಂತೆ 300ಕ್ಕೂ ಹೆಚ್ಚಿನ ಕಡೆಗಳಲ್ಲಿ ಗುಂಡಿಗಳಿರುವ ಬಗ್ಗೆ ವರದಿ ನೀಡಿದ್ದರು.

ಆದರೆ, ಪಾಲಿಕೆಯ ಅಧಿಕಾರಿಗಳು ಶೀಘ್ರ ದುರಸ್ತಿ ಕಾರ್ಯಕ್ಕೆ ಮುಂದಾಗಿಲ್ಲ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಯುಕ್ತರು ಭೇಟಿ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next