Advertisement

ಬೆಳಗಾವಿಯಲ್ಲಿ ಅನುಚಿತ ವರ್ತನೆ: ಯಡ್ರಾವಕರ

11:51 PM Jan 17, 2020 | Team Udayavani |

ಮುಂಬೈ: ಬೆಳಗಾವಿ ಭೇಟಿ ವೇಳೆ ತಮ್ಮನ್ನು ಎಳೆದಾಡಲಾಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಂದ್ರ ಪಾಟೀಲ್‌ ಯಡ್ರಾವಕರ ಆರೋಪಿಸಿದ್ದಾರೆ. ಈ ಘಟನೆಯ ಬಳಿಕ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ವರೆಗೆ ಪೊಲೀಸರು ಭದ್ರತೆ ನೀಡಿ ಕಳುಹಿಸಿಕೊಟ್ಟಿದ್ದಾರೆ. ಈ ಘಟನೆಯನ್ನು ಬಿಜೆಪಿ ಖಂಡಿಸಬೇಕು ಎಂದು ಒತ್ತಾಯಿಸಿದ್ದಾರೆ.

Advertisement

ಬೆಳಗಾವಿಯಲ್ಲಿ ಎಂಇಎಸ್‌ ಆಯೋಜಿಸಿದ್ದ ಕಾರ್ಯ ಕ್ರಮದಲ್ಲಿ ಸಚಿವರು ಭಾಗವಹಿಸಿದ್ದರು. ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ವಕ್ತಾರ, ಸಂಸದ ಸಂಜಯ ರಾವತ್‌, “ಕರ್ನಾಟಕ ನಡೆದುಕೊಂಡ ರೀತಿ ಭಯೋತ್ಪಾದನೆಯಂತಿದೆ’ ಎಂದು ಟ್ವೀಟ್‌ ಮಾಡಿದ್ದಾರೆ. ಜತೆಗೆ ಬೆಳಗಾವಿಗೆ ಶನಿವಾರ ಭೇಟಿ ನೀಡುವುದಾಗಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next