ನವದೆಹಲಿ: 2020ರ ಆರಂಭದಲ್ಲಿ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣದಲ್ಲಿ ಅಪರಾಧಿ ಎಂದು ಪರಿಗಣಿಸಲ್ಪಟ್ಟಿರುವ ದಿನೇಶ್ ಯಾದವ್ಗೆ ದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಜೈಲು ಹಾಗೂ 12 ಸಾವಿರ ರೂ.ಗಳ ದಂಡ ವಿಧಿಸಿದೆ.
ದಿನೇಶ್ ಈ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮೊದಲ ಅಪರಾಧಿ. ಗಲಭೆ ಹಬ್ಬಿಸುವಲ್ಲಿ ಆತನ ಪಾತ್ರ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿರುವುದಾಗಿ ತೀರ್ಪನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವೀರೇಂದ್ರ ಭಟ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ತಿದ್ದುಪಡಿಯನ್ನು ಮಸೂದೆಯನ್ನು ವಿರೋಧಿಸಿ ನಡೆದಿದ್ದ ಈ ಗಲಭೆಯಲ್ಲಿ 50ಕ್ಕೂ ಹೆಚ್ಚು ಜನರು ಸಾವಿಗೀಡಾಗಿ, ನೂರಾರು ಜನರು ಗಾಯಗೊಂಡಿದ್ದರು.