Advertisement

ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಎದುರಲ್ಲೇ ಕಾರ್ಯಕರ್ತರಿಂದ ಗದ್ದಲ

08:49 PM Apr 02, 2024 | Team Udayavani |

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಲ್ಲೇ ಕಾರ್ಯಕರ್ತರು ಗದ್ದಲ ನಡೆಸಿದ ಘಟನೆ ಮಂಗಳವಾರ ನಡೆಯಿತು.

Advertisement

ನಗರದ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರನ್ನು ಸ್ವಾಗತಿಸುವ ವೇಳೆ ಮಾವಿನಹಳ್ಳಿ ಸಿದ್ದೇಗೌಡ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು.

ಇದರಿಂದ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋಲಲು ಕಾರಣವಾದ ವ್ಯಕ್ತಿಯನ್ನೇಕೆ ವೇದಿಕೆ ಏರಿಸಿದ್ದೀರಿ. ಆತನನ್ನು ಸಭೆಯಿಂದ ಹೊರ ಕಳಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಧ್ಯ ಪ್ರವೇಶ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಇಲ್ಲಿ ವೈಯುಕ್ತಿಕ ವಿಚಾರ ಏನನ್ನು ಹೇಳಲು ಅವಕಾಶ ಇಲ್ಲ. ವೈಯುಕ್ತಿಕ ಹೇಳಿಕೆ ಕೊಡಲು ಬಂದಿದ್ದರೆ ಹೊರಗೆ ಹೋಗಿ ಎಂದು ಗದರಿಸುವ ಮೂಲಕ ಗದ್ದಲವನ್ನು ತಿಳಿಗೊಳಿಸಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next