Advertisement

ಗೋಕಾಕದಲ್ಲಿ ಬಿಜೆಪಿಗೆ ಶಕ್ತಿ ತುಂಬಲಿದ್ದಾರೆ ವಿಶೇಷ ವ್ಯಕ್ತಿ

11:14 PM Apr 13, 2019 | Team Udayavani |

ಗೋಕಾಕ: ಗೋಕಾಕ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆ ಈ ಬಾರಿ ವಿಶೇಷವಾಗಲಿದೆ. ವಿಶೇಷ ವ್ಯಕ್ತಿಯೊಬ್ಬರು ಕಾರ್ಯಕರ್ತರಿಗೆ ಶಕ್ತಿ ತುಂಬಲಿದ್ದಾರೆ ಎಂದು ಬಾಲಚಂದ್ರ ಜಾರಕಿಹೊಳಿ ಒಗಟಿನ ಮಾತನಾಡಿ ಕುತೂಹಲ ಹೆಚ್ಚಿಸಿದ್ದಾರೆ.

Advertisement

ನಗರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಗೋಕಾಕ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚಿನ ಶಕ್ತಿ ದೊರಕಿದೆ.

ಆ ಶಕ್ತಿಯಾವುದು ಎನ್ನುವುದು ಎಲ್ಲರಿಗೂ ಗೊತ್ತು ಎಂದು ಹೇಳುವ ಮೂಲಕ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರದ ವಿರುದ್ಧ ಮುನಿಸಿಕೊಂಡಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿ ಸೇರುತ್ತಾರೆಂಬ ವದಂತಿಗೆ ಪುಷ್ಟಿ ನೀಡಿದರು.

ಅಲ್ಲದೇ ಲೋಕಸಭಾ ಚುನಾವಣೆಯೊಳಗೆ ಬಿಜೆಪಿ ಸೇರಬಹುದು ಎನ್ನುವ ಸುಳಿವನ್ನೂ ನೀಡಿದರು. ಇದರಿಂದ ಲೋಕಸಭೆ ಚುನಾವಣೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ನಿಲುವು ಏನು ಎಂಬ ಬಗ್ಗೆ ನಿಗೂಢತೆ ಜನರಲ್ಲಿ ಹೆಚ್ಚಿದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next