Advertisement

“ಬುಲೆಟ್ ನಿಂದಲ್ಲ, ಪ್ರೀತಿಯಿಂದ ಮಾತ್ರ ಕಾಶ್ಮೀರ ಸಮಸ್ಯೆಗೆ ಪರಿಹಾರ”

11:50 AM Aug 15, 2017 | Team Udayavani |

ನವದೆಹಲಿ:ಕಾಶ್ಮೀರ ಸಮಸ್ಯೆಯನ್ನು ಬುಲೆಟ್ಸ್(ಗುಂಡು) ಅಥವಾ ನಿಂದಿಸುವ ಮೂಲಕ ಬಗೆಹರಿಸಿಕೊಳ್ಳಲು ಸಾಧ್ಯವಿಲ್ಲ. ಕಾಶ್ಮೀರಿ ಜನರ ಪ್ರೀತಿಯಿಂದ ಮಾತ್ರ ಸಮಸ್ಯೆ ಇತ್ಯರ್ಥ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

Advertisement

ನವದೆಹಲಿಯ ಕೆಂಪುಕೋಟೆಯಲ್ಲಿ ಮಂಗಳವಾರ 71ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉತ್ತರಪ್ರದೇಶದ ಗೋರಖ್ ಪುರ ಸರ್ಕಾರಿ ಆಸ್ಪತ್ರೆಯಲ್ಲಿನ ಮಕ್ಕಳ ಸಾವಿನ ಕುರಿತು ಪ್ರಸ್ತಾಪಿಸಿದ ಪ್ರಧಾನಿ, ಇದೊಂದು ಘೋರ ದುರಂತ. ದುಃಖತಪ್ತ ಕುಟುಂಬಗಳ ಜತೆ ನಾವಿದ್ದೇವೆ ಎಂದು ಹೇಳಿದರು.  ಜಾತಿವಾದ ಮತ್ತು ಕೋಮುವಾದ ವಿಷವಿದ್ದಂತೆ, ಅದರಿಂದ ನಮ್ಮ ದೇಶಕ್ಕೆ ಯಾವುದೇ ಲಾಭವಿಲ್ಲ ಎಂದು ಉಲ್ಲೇಖಿಸಿದರು. ನಮ್ಮದು ಭಗವಾನ್ ಬುದ್ಧ ಮತ್ತು ಮಹಾತ್ಮ ಗಾಂಧಿ ಜನಿಸಿದ ನಾಡು. ಹಾಗಾಗಿ ನಮ್ಮ ದೇಶ ಶಾಂತಿ, ಸೌಹಾರ್ದತೆಯ ಬೀಡು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next