Advertisement

Kerala ದೋಣಿ ದುರಂತ: ಮೃತರ ಸಂಖ್ಯೆ 21 ಕ್ಕೆ ಏರಿಕೆ

08:01 AM May 08, 2023 | Team Udayavani |

ಮಲಪ್ಪುರಂ: ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಮೃತರ ಸಂಖ್ಯೆ 21 ಕ್ಕೆ ಏರಿದೆ.

Advertisement

ಡಬಲ್‌ ಡೆಕ್ಕರ್‌ ದೋಣಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಥೂವಲ್‌ ಥೀರಮ್‌ ಎಂಬ ಪ್ರವಾಸಿ ತಾಣದಲ್ಲಿರುವ ಪುರಪುಳ ನದಿಯಲ್ಲಿ ದೋಣಿ ವಿಹಾರ ನಡೆಸಲಾಗುತ್ತಿತ್ತು.

ರವಿವಾರ ರಾತ್ರಿ 7 ಗಂಟೆ ವೇಳೆಗೆ ಏಕಾಏಕಿ ದೋಣಿ ಮುಳುಗಿದ್ದು, ಕೂಡಲೇ ಮೀನುಗಾರರು ಹಾಗೂ ಸ್ಥಳೀಯರು ಧಾವಿಸಿ 10 ಮಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಪಘಾತದ ಮಾಹಿತಿ ಬಂದ ತಕ್ಷಣ ರಾಜ್ಯ ಸರ್ಕಾರದ ಸಚಿವ ವಿ.ಅಬ್ದುರಹ್ಮಾನ್ ಕೂಡ ಸ್ಥಳದಲ್ಲಿದ್ದಾರೆ ಭೇಟಿ ನೀಡಿದರು.

ದುರಂತದಲ್ಲಿ ಮಕ್ಕಳು, ಮಹಿಳೆಯರು ಮತ್ತು ಪುರುಷರು ಸೇರಿದಂತೆ 21 ಮಂದಿ ಸಾವನ್ನಪ್ಪಿದ್ದಾರೆ. ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

Advertisement

ದುರ್ಘ‌ಟನೆಯ ಕುರಿತು ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಜತೆಗೆ ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next