Advertisement

“ಪಕ್ಷಕ್ಕಾಗಿ ಒಪ್ಪಿಕೊಂಡೆ…”: DCM ಹುದ್ದೆಯ ಬಗ್ಗೆ ಡಿಕೆ ಶಿವಕುಮಾರ್ ಮಾತು

10:57 AM May 18, 2023 | Team Udayavani |

ಹೊಸದಿಲ್ಲಿ: ಪಕ್ಷದ ಹಿತದೃಷ್ಟಿಯಿಂದ ಉಪಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಳ್ಳಲು ಒಪ್ಪಿರುವುದಾಗಿ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಗುರುವಾರ ಖಚಿತಪಡಿಸಿದ್ದಾರೆ.

Advertisement

ಇಂಡಿಯಾ ಟುಡೆ ಜೊತೆ ಮಾತನಾಡಿದ ಅವರು, “ಕರ್ನಾಟಕದ ಬಗ್ಗೆ ನಮಗೆ ಬದ್ಧತೆಯಿದೆ. ಸಂಸತ್ ಚುನಾವಣೆಯಿದೆ. ಹೀಗಾಗಿ ಪಕ್ಷದ ಹಿತಾಸಕ್ತಿಯಿಂದ ಈ ಸೂತ್ರಕ್ಕೆ ಒಪ್ಪಿಗೆ ಸೂಚಿಸಿದ್ದೇನೆ” ಎಂದರು.

”ಕರ್ನಾಟಕಕ್ಕೆ ಸೇವೆ ಸಲ್ಲಿಸುವ ಜವಾಬ್ದಾರಿ ನನ್ನ ಮೇಲಿದೆ. ನಾವು ಅದನ್ನು ಮಾಡಬೇಕಿದೆ” ಎಂದು ಡಿಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ:Cabinet ಸರ್ಜರಿ ಮಾಡಿದ ಮೋದಿ: Kiren Rijiju ಬದಲು ಕಾನೂನು ಸಚಿವರಾಗಿ ಅರ್ಜುನ್ ರಾಮ್

ಸತತ ಮಾತುಕತೆಯ ಬಳಿಕ ಸಿದ್ದರಾಮಯ್ಯ ಅವರಿಗೆ ಮತ್ತೆ ಸಿಎಂ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧರಿಸಿದರು. ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವು ಮೇ.20ರಂದು ನಡೆಯಲಿದೆ ಎಂದು ವರದಿಯಾಗಿದೆ.

Advertisement

ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ಸಿಕ್ಕಿದ ಬಗ್ಗೆ ಅವರ ಸಹೋದರ, ಸಂಸದ ಡಿಕೆ ಸುರೇಶ್ ಬೇಸರ ವ್ಯಕ್ತಪಡಿಸಿದರು.

“ನಾನೇನು ಸಂಪೂರ್ಣ ಸಂತುಷ್ಟನಾಗಿಲ್ಲ. ಆದರೆ ಕರ್ನಾಟಕದ ಹಿತದೃಷ್ಟಿಯಿಂದ ನಾವು ನಮ್ಮ ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ. ಹೀಗಾಗಿ ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕಾಯಿತು. ಭವಿಷ್ಯದಲ್ಲಿ ನಾವು ನೋಡುತ್ತೇವೆ, ಹೋಗಲು ಬಹಳ ದೂರವಿದೆ. ನನ್ನ ಇಚ್ಛೆ ಪೂರ್ಣಗೊಳ್ಳಲಿಲ್ಲ, (ಡಿಕೆ ಶಿವಕುಮಾರ್ ಗೆ ಸಿಎಂ ಹುದ್ದೆ), ಕಾದು ನೋಡೋಣ” ಎಂದು ಡಿಕೆ ಸುರೇಶ್ ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next