Advertisement

“ಕೈ” ಹಿರಿಯ ನಾಯಕರಿಂದ ಬೆದರಿಕೆ ಇದೆ, ನಮಗೆ ರಕ್ಷಣೆ ಕೊಡಿ: ಮುಂಬೈ ಪೊಲೀಸರಿಗೆ ಪತ್ರ

09:45 AM Jul 16, 2019 | Team Udayavani |

ಮುಂಬೈ:ಕಾಂಗ್ರೆಸ್, ಜೆಡಿಎಸ್ ಅತೃಪ್ತ ಶಾಸಕರ ಮನವೊಲಿಕೆಗೆ ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡರು ಕಸರತ್ತು ನಡೆಸುತ್ತಿರುವ ನಡುವೆಯೇ ಇದೀಗ ತಮಗೆ ಕಾಂಗ್ರೆಸ್ ಹಿರಿಯ ನಾಯಕರಿಂದ ಬೆದರಿಕೆ ಇರುವುದಾಗಿ ಅತೃಪ್ತ ಶಾಸಕರು ಮುಂಬೈ ಪೊಲೀಸರಿಗೆ ಪತ್ರ ಬರೆದಿದ್ದಾರೆ.

Advertisement

ಮುಂಬೈ ಪೊಲೀಸರಿಗೆ ಬರೆದ ಪತ್ರದಲ್ಲಿ, ನಮಗೆ ಕಾಂಗ್ರೆಸ್ ನ ಹೈಕಮಾಂಡ್ ಜೊತೆ ಮಾತನಾಡುವ, ಸಭೆ ನಡೆಸುವ ಯಾವುದೇ ಇಚ್ಛೆ ಇಲ್ಲ, ನಮಗೆ ಕಾಂಗ್ರೆಸ್ ಮುಖಂಡರಿಂದ ಬೆದರಿಕೆ ಎದುರಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್ ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರದ ಯಾವುದೇ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಲು ಇಚ್ಛಿಸುವುದಿಲ್ಲ. ಅವರಿಂದ ನಮಗೆ ಗಂಭೀರ ಬೆದರಿಕೆ ಇದೆ ಎಂದು ಉಲ್ಲೇಖಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಮ್ಮ ಜೊತೆ ಕಾಂಗ್ರೆಸ್ ನಾಯಕರು ಮಾತುಕತೆ ನಡೆಸಲು ಮುಂದಾದರೆ ಅದಕ್ಕೆ ಅವಕಾಶ ನೀಡದೆ ನಮಗೆ ಅಗತ್ಯವಾದ ಪೊಲೀಸ್ ನೆರವು ನೀಡಬೇಕೆಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮುಂಬೈನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ಅತೃಪ್ತ ಶಾಸಕರ ಮನವೊಲಿಸಲು ಸೋಮವಾರ ಸಿಎಂ ಕುಮಾರಸ್ವಾಮಿ, ಡಿಸಿಎಂ ಜಿ.ಪರಮೇಶ್ವರ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮುಂಬೈಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next