Advertisement

ಜ್ಯೋತಿರಾದಿತ್ಯ ಸಿಂದ್ಯಾ ಎಫೆಕ್ಟ್: ಮಧ್ಯಪ್ರದೇಶ ಸಚಿವ ಸಂಪುಟಕ್ಕೆ 28 ಮಂದಿ ಸೇರ್ಪಡೆ

03:26 PM Jul 02, 2020 | Nagendra Trasi |

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 28 ಮಂದಿಗೆ ಸಚಿವ ಸ್ಥಾನ ನೀಡುವ ಮೂಲಕ ಸಂಪುಟ ವಿಸ್ತರಿಸಿದ್ದಾರೆ. ಕಾಂಗ್ರೆಸ್ ಮಾಜಿ ಮುಖಂಡ ಜ್ಯೋತಿರಾದಿತ್ಯ ಸಿಂದಿಯಾ ಅವರ ಹಲವು ಆಪ್ತರು ಸಚಿವ ಸಂಪುಟದಲ್ಲಿ ಸೇರ್ಪಡೆಯಾಗಿದ್ದಾರೆ.

Advertisement

ದೀರ್ಘ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಜ್ಯೋತಿರಾದಿತ್ಯ ಸಿಂದಿಯಾ ಹಾಗೂ ಅವರ ಆಪ್ತರು ಮಾರ್ಚ್ ನಲ್ಲಿ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡಿದ್ದರು. ಸಿಂದಿಯಾ ಅವರ ಚಿಕ್ಕಮ್ಮ ಯಶೋಧರಾ ರಾಜೆ ಸಿಂದಿಯಾ ಅವರು ಕೂಡಾ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ಜ್ಯೋತಿರಾದಿತ್ಯ ಅವರ ಆಪ್ತರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ತುಂಬಾ ವಿಳಂಬವಾಗಿತ್ತು. ಅಷ್ಟೇ ಅಲ್ಲ ಮೂಲಗಳ ಪ್ರಕಾರ, ಪಕ್ಷದ ಹೈಕಮಾಂಡ್ ಆದೇಶದ ಮೇರೆಗೆ ಹಲವು ಆಕಾಂಕ್ಷಿಗಳು ಇದ್ದಿದ್ದು, ಅವರಿಗೆ ಬೇರೆ ಅವಕಾಶ ನೀಡುವುದಾಗಿ ಭರವಸೆ ನೀಡಿರುವುದಾಗಿ ತಿಳಿಸಿದೆ.

ಸಮುದ್ರ ಮಥನದ ಸಂದರ್ಭದಲ್ಲಿ ಅಮೃತ ಹೊರಬರುತ್ತದೆ, ಆದರೆ ವಿಷವನ್ನು ಮಾತ್ರ ಶಿವ ಕುಡಿಯುತ್ತಾನೆ ಎಂದು ಚೌಹಾಣ್ ಸಂಪುಟ ವಿಸ್ತರಣೆ ನಂತರ ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next