Advertisement

ಆಕ್ಸಿಜನ್ ಕೊರತೆ : ಎಲ್ಲಾ ಕ್ರಮಗಳನ್ನು ಸಮರೋಪಾದಿಯಲ್ಲಿ ತೆಗೆದುಕೊಳ್ಳಲಾಗುತ್ತಿದೆ : BSY

07:49 PM May 05, 2021 | Team Udayavani |

ಬೆಂಗಳೂರು : ಕೋವಿಡ್ ಸೋಂಕಿನ ಎರಡನೇ ಅಲೆಯ ಕಾರಣದಿಂದಾಗಿ ರಾಜ್ಯ ಭೀಕರ ಸ್ಥಿತಿಯನ್ನು ತಲುಪಿದೆ. ಆಕ್ಸಿಜನ್ ಅಭಾವ ರಾಜ್ಯವನ್ನು ಬಲವಾಗಿ ಕಾಡುತ್ತಿದ್ದು, ಆಕ್ಸಿಜನ್ ಪೂರೈಸುವಲ್ಲಿ ಆಡಳಿತ ಪಕ್ಷ ವಿಫಲವಾಗಿದೆ ಎಂಬ ಅಭಿಪ್ರಾಯ ಹುಟ್ಟಿಕೊಂಡಿದೆ.

Advertisement

ಓದಿ : ರಾಜ್ಯದಲ್ಲಿಂದು ಅರ್ಧ ಲಕ್ಷ ಕೋವಿಡ್ ಪ್ರಕರಣಗಳು: ಬರೋಬ್ಬರಿ 346 ಜನರು ಬಲಿ

ಆಕ್ಸಿಜನ್ ಬಗೆಗಿನ ಬೆಳವಣೆಯನ್ನು ಸರಣಿ ಟ್ವೀಟ್ ಮಾಡುವ ಮೂಲಕ ಹಂಚಿಕೊಂಡ ಮುಖ್ಯಮಂತ್ರಿ ಬಿ ಎಸ್ ವೈ, ನಮ್ಮ ರಾಜ್ಯಕ್ಕೆ ವೈದ್ಯಕೀಯ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸುವ ಸಲುವಾಗಿ, ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತಲಾ 20 ಮೆಟ್ರಿಕ್ ಟನ್ ಸಾಮರ್ಥ್ಯದ 4 ಟ್ಯಾಂಕರ್‌ ಗಳನ್ನು ಕಳುಹಿಸಲಿದ್ದು, ಈ ಪೈಕಿ ಎರಡು ಕಂಟೇನರ್‌ ಗಳು ಇಂದು(ಬುಧವಾರ, ಮೇ. 05) ಮಂಗಳೂರಿನ ಎನ್‌ ಎಂ ಪಿ ಟಿ ಗೆ ಬಂದಿವೆ ಎಂದು ತಿಳಿಸಿದ್ದಾರೆ.


ಆಕ್ಸಿನ್ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ಸೋಂಕಿತರು ಮೃತರಾಗುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿರುವುದರ ನಡುವೆ ರಾಜ್ಯಕ್ಕೆ ಕೇಂದ್ರದಿಂದ ಎರಡು ಆಕ್ಸಿಜನ್ ಟ್ಯಾಂಕರ್ ಗಳು ಬಂದಿವೆ.

ಇನ್ನು, ರಾಜ್ಯಕ್ಕೆ ದ್ರವ ಆಕ್ಸಿಜನ್ ತರಲು ರಾಜ್ಯಸರ್ಕಾರ 5 ಟ್ಯಾಂಕರ್‌ಗಳನ್ನು ವಾಯುಪಡೆ ವಿಮಾನಗಳ ಮೂಲಕ ಒರಿಸ್ಸಾಗೆ ಕಳುಹಿಸಿದ್ದು, ಸುಮಾರು 74 ಮೆಟ್ರಿಕ್ ಟನ್ ಆಕ್ಸಿಜನ್ ಇನ್ನು 2-3 ದಿನಗಳಲ್ಲಿ ರಾಜ್ಯಕ್ಕೆ ಬರಲಿದೆ. ಸಾಂಕ್ರಾಮಿಕ ನಿರ್ವಹಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಸಮರೋಪಾದಿಯಲ್ಲಿ ತೆಗೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ.

Advertisement

ಹೆಚ್ಚಿನ ಆಕ್ಸಿಜನ್ ಸರಬರಾಜು ನಿಟ್ಟಿನಲ್ಲಿ ನಮ್ಮ ಮನವಿಗೆ ಶೀಘ್ರವಾಗಿ ಸ್ಪಂದಿಸಿರುವ ಕೇಂದ್ರ ಸರ್ಕಾರ ತಲಾ 20 ಟನ್ ಸಾಮರ್ಥ್ಯದ 2 ದ್ರವ ವೈದ್ಯಕೀಯ ಆಕ್ಸಿಜನ್ ಕಂಟೇನರ್ ಗಳನ್ನು ಬಹ್ರೇನ್‌ನಿಂದ ರಾಜ್ಯಕ್ಕೆ ಕಳುಹಿಸಿದೆ. ಜೊತೆಗೆ 2 ಹೆಚ್ಚುವರಿ ಕಂಟೇನರ್‌ಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಮೂಲಕ ಕಳುಹಿಸಲು ಒಪ್ಪಿದೆ  ಎಂದು ಅವರು ಮಾಹಿತಿ ನೀಡಿದ್ದಾರೆ.

ಓದಿ : ಅಧಿಕಾರಿಗಳನ್ನು ಅಮಾನತು ಮಾಡಿ, ಸಚಿವರು ರಾಜೀನಾಮೆ ನೀಡಲಿ : ಅಭಯಚಂದ್ರ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next