Advertisement

ಮಧ್ಯಪ್ರದೇಶಕ್ಕೆ ಕೇಂದ್ರ ಸಚಿವ ಸಿಂಧಿಯಾ ಮುಖ್ಯಮಂತ್ರಿ?

07:28 PM Feb 23, 2022 | Team Udayavani |

ಗ್ವಾಲಿಯರ್‌:ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಮಧ್ಯಪ್ರದೇಶದ ಮುಖ್ಯಮಂತ್ರಿ ಆಗುವರೇ? ಹೀಗೊಂದು ವಿಚಾರ ದಿಢೀರನೆ ಚರ್ಚೆಗೆ ಕಾರಣವಾಗಿದೆ.

Advertisement

ಮಂಗಳವಾರ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಜೈನಮುನಿ ವಿಜಯೇಶ್‌ ಸಾಗರ್‌ ಮಹಾರಾಜ್‌ ಅವರು ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ.

“ಸಿಂಧಿಯಾ ಜೀ ಅವರೇ ಮುಂದಿನ ಕೆಲವೇ ದಿನಗಳಲ್ಲಿ ನೀವು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಲಿದ್ದೀರಿ. ಅವರಿಗೆ ರಾಜ್ಯದ ಮೇಲೆ ಅಪಾರ ಪ್ರೀತಿ ಇದೆ. ಜನರ ಸೇವೆ ಮಾಡಿ ಮಧ್ಯಪ್ರದೇಶ ಎಲ್ಲಾ ರಂಗಗಳಲ್ಲಿ ಮಿಂಚುವಂತೆ ಮಾಡಿ. ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಧ್ಯಪ್ರದೇಶ ಹಿಂದುಳಿದಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ:ರಾಜಿನಾಮೆಗೆ ಬಿಜೆಪಿ ಪಟ್ಟು: ಬಂಧಿತ ನವಾಬ್ ಮಲಿಕ್ ಗೆ ಮಮತಾ ಬ್ಯಾನರ್ಜಿ ಬೆಂಬಲ

ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಬೆಂಬಲಿಗರು ಹರ್ಷೋದ್ಗಾರ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಹಾಜರಿದ್ದ ಕೇಂದ್ರ ಸಚಿವ ಸಿಂಧಿಯಾ ಈ ಬಗ್ಗೆ ಪ್ರತಿಕ್ರಿಯೆ ನೀಡಲಿಲ್ಲ. ಮಧ್ಯಪ್ರದೇಶದ ಬಿಜೆಪಿ ಮುಖಂಡರೂ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next