Advertisement

ಕಾವೇರಿ ವಿಷಯದಲ್ಲಿ ಕೇಂದ್ರದಿಂದ ಅನ್ಯಾಯ

06:25 AM Jun 29, 2018 | Team Udayavani |

ಬೆಂಗಳೂರು: ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ
ಎಂದು ಮಾಜಿ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ. 

Advertisement

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್‌ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಹೇಳಿರಲಿಲ್ಲ. ಅಂತಾರಾಷ್ಟ್ರೀಯ ಜಲ ವಿವಾದ ಕಾಯ್ದೆ ಸೆಕ್ಷನ್‌ 6ಎ ಪ್ರಕಾರ ಒಂದು ಸಮಿತಿ ರಚಿಸಬೇಕೆಂದು ಹೇಳಿತ್ತು. ರಾಜ್ಯದ ನಿಲುವನ್ನು ರಾಜ್ಯ ಜಲ ಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.

ಆಮೇಲೆ ರಾಜ್ಯದ ನಾಯಕರು ಕೇಂದ್ರದ ಮೇಲೆ ಒತ್ತಡ ಹೇರಲು ವಿಫ‌ಲರಾಗಿದ್ದಾರೆ ಎನಿಸುತ್ತಿದೆ. ಹೀಗಾಗಿ, ಕೇಂದ್ರ
ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದೆ.

ಜಲಾಶಯಗಳಲ್ಲಿ ನೀರಿನ ಕೊರತೆ ಇದ್ದಾಗ ಮಾತ್ರ ಸಮಸ್ಯೆ ಎದುರಾಗುತ್ತದೆ. ಇದಕ್ಕೆ ನಿರ್ವಹಣಾ ಪ್ರಾಧಿಕಾರಕ್ಕಿಂತ
ಒಂದು ಸಮಿತಿ ರಚಿಸಿದ್ದರೆ ಸಾಕಾಗಿತ್ತು. ಈಗ ರಾಜ್ಯ ಸರ್ಕಾರದ ಕೈಯಲ್ಲಿ ಏನೂ ಇಲ್ಲ. ಸರ್ಕಾರ ಸರ್ವಪಕ್ಷ ಸಭೆ
ಕರೆದಿದ್ದು, ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next