Advertisement

ಪರೀಕ್ಷೆಗಳಲ್ಲಿ ಪ್ರಾದೇಶಿಕ ಭಾಷೆ: 27ರಂದು ಜೇಟ್ಲಿಗೆ ಮನವಿ

12:34 PM Dec 25, 2017 | |

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಿಗೆ ಅವಕಾಶ ನೀಡಬೇಕೆಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.

Advertisement

ಡಿಸೆಂಬರ್‌ 27 ರಂದು ದೆಹಲಿಯಲ್ಲಿ ಅರುಣ್‌ ಜೇಟ್ಲಿಯನ್ನು ಭೇಟಿ ಮಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಬ್ಯಾಂಕಿಂಗ್‌ ಪರೀಕ್ಷೆಗಳಲ್ಲಿ ಪ್ರಾದೇಶಕ ಭಾಷೆಯಲ್ಲಿ ಬರೆಯಲು ಅವಕಾಶ ನಿರಾಕರಿಸುವುದರಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯುಂಟಾಗುತ್ತದೆ.

ಅಲ್ಲದೇ ಹಿಂದಿ, ಇಂಗ್ಲಿಷ್‌ ಹೊರತುಪಡಿಸಿ ಬೇರೆ ಪ್ರಾದೇಶಿಕ ಭಾಷೆಗಳ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿರುವುದರಿಂದ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಜಿ. ಸಿದ್ದರಾಮಯ್ಯ ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next