Advertisement

ಮುಂದಿನ ಮೂರು ವರ್ಷಗಳಲ್ಲಿ ಮಾದರಿ ರಾಜ್ಯ ಮಾಡಲು ಪ್ರಯತ್ನಿಸುತ್ತೇನೆ: ಬಿಎಸ್ ಯಡಿಯೂರಪ್ಪ

04:58 PM Jul 27, 2020 | keerthan |

ಬೆಂಗಳೂರು: ಕೋವಿಡ್-19 ಕಾಣಿಸಿಕೊಂಡು ರಾಜ್ಯದ ಅಭಿವೃದ್ಧಿ ಕಾರ್ಯಕ್ಕೆ ಕಂಟಕವಾಗಿ ಪರಿಣಮಿಸದ್ದು ನೋವುಂಟು ಮಾಡಿದೆ. ರಾಜ್ಯದ ಜನರ ಋಣ ತೀರಿಸಬೇಕಿದ್ದು, ಅದಕ್ಕಾಗಿ ಶ್ರಮಿಸಿ ಮುಂದಿನ ಮೂರು ವರ್ಷಗಳಲ್ಲಿ ಮಾದರಿ ರಾಜ್ಯ ಮಾಡಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

Advertisement

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಸೋಮವಾರ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಬಗ್ಗೆ ಚರ್ಚಿಸುವುದಿಲ್ಲ. ಕೋವಿಡ್ ನೊಂದಿಗೆ ಬದುಕಬೇಕಿದೆ. ಎಲ್ಲ ಜಿಲ್ಲಾಧಿಕಾರಿಗಳು ಸೋಂಕು ನಿಯಂತ್ರಣಕ್ಕೆ ಶ್ರಮವಹಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ನಾನು ಎಂದೂ ದ್ವೇಷದ ರಾಜಕಾರಣ ಮಾಡಿಲ್ಲ‌‌‌. ಟೀಕಿಸಿದವರನ್ನೂ ಗೌರವದಿಂದ ಕಾಣುತ್ತೇನೆ. ರಾಜ್ಯದ ಅಭಿವೃದ್ಧಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಇದರ ವೇಳೆ 10 ಮಂದಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next