Advertisement

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

04:04 PM May 19, 2024 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ. ಮನೆಗೆ ನುಗ್ಗಿ ಯುವತಿ ಕೊಲೆ ಮಾಡುತ್ತಾರೆಂದರೆ ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬ ಆತಂಕವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ ಕಳವಳ ವ್ಯಕ್ತಪಡಿಸಿದರು.

Advertisement

ಮೃತ ಅಂಜಲಿ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ ಅವರು, ನೇಹಾ ಹಿರೇಮಠ ಹತ್ಯೆಯಾದಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಗೃಹ ಸಚಿವರು ಇದರ ಹೊಣೆಗಾರಿಕೆ ಹೊರಬೇಕು. ಪೊಲೀಸ್ ಅಧಿಕಾರಿಗಳು ಅಲರ್ಟ್ ಆಗಬೇಕು. ಬಡ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಬೇಕು ಎಂದು ಆಗ್ರಹಿಸಿದರು.

ಸ್ಥಳೀಯ ಶಾಸಕರು ಇನ್ನೊಬ್ಬರ ಮೇಲಿನ ಸುಳ್ಳು ಆಪಾದನೆ ಮಾಡುವುದು ಹಾಗೂ ಫೋಟೋ ಫೋಸ್ ಕೊಡುವುದನ್ನು ನಿಲ್ಲಿಸಿಬೇಕು. ಮೃತ ಅಂಜಲಿ ಅಂಬಿಗೇರ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ನೀಡಬೇಕು. ಮನೆ ಕೊಡಬೇಕು. ಭದ್ರತೆ ಒದಗಿಸಬೇಕು. ಡಿಸಿಪಿ, ಇನ್ಸ್‌ಪೆಕ್ಟರ್ ತಲೆದಂಡ ಸರಿಯಲ್ಲ. ನಿಜವಾದ ತಪ್ಪಿತಸ್ಥರ ಮೇಲೆ ಕ್ರಮವಾಗಬೇಕು. ಗಾಂಜಾ ನಶೆಯಲ್ಲಿ ಇಂತಹ ದುಷ್ಕೃತ್ಯಗಳು ನಡೆಯುತ್ತಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next