Advertisement

ಕಲ್ಲೂರಲ್ಲಿ ಕುಡಿವ ನೀರು ಅಸಮರ್ಪಕ ವಿತರಣೆ

12:21 PM Dec 22, 2019 | Suhan S |

ಮುಳಗುಂದ: ಸಮೀಪದ ಕಲ್ಲೂರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ವಹಿಸಿದ್ದರಿಂದ ಸಾರ್ವಜನಿಕರಿಗೆ ತೊಂದರೆಯುಂಟಾಗಿದೆ.

Advertisement

ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯಡಿ ಎಲ್ಲ ಗ್ರಾಮಗಳಿಗೂ ನೀರು ಸರಬರಾಜಾಗುತ್ತಿದ್ದರು ಮಧ್ಯದ ಕೆಲ ಪಟ್ಟಣಗಳಿಗೆ ನೀರು ಬಳಕೆ ಮಾಡಿಕೊಳುತ್ತಿರುವುದರಿಂದ ಗ್ರಾಮೀಣ ಭಾಗಗಳಲ್ಲಿ ತೊಂದರೆಯುಂಟಾಗುತ್ತಿದೆ. ಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಗ್ರಹಿಸಿದ್ದು, ಕೂಡಲೇ ಜಿಲ್ಲಾಡಳಿತ ಇತ್ತ ಗಮನ ಹರಿಸದಿದ್ದರೆ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next