Advertisement

ಕಲಬುರಗಿಯಲ್ಲಿ 371ಜೆ ವಿಧಿ ಜಾರಿ ಪ್ರಾದೇಶಿಕ ಕಚೇರಿ ಸ್ಥಾಪನೆ: ಬಿಎಸ್ ವೈ ಧ್ವಜಾರೋಹಣ

09:44 AM Sep 18, 2019 | keerthan |

ಕಲಬುರಗಿ : 371 ಜೆ ಆಡಳಿತ ಶಾಖೆಯ ಪ್ರಾದೇಶಿಕ ಕಚೇರಿಯನ್ನು ಬೆಂಗಳೂರಿನ ಜತೆಗೆ ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲೂ ಶಾಖೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

Advertisement

ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಮಂಗಳವಾರ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕವಾಗಿ ಆಡಳಿತ ಕಚೇರಿ ಮತ್ತು ಸಚಿವಾಲಯ ಸ್ಥಾಪಿಸಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ನಾಮಕರಣಕ್ಕೆ ಬಸವರಾಜ ಪಾಟೀಲ ಸೇಡಂ ಪ್ರಯತ್ನಕ್ಕೆ ಎಲ್ಲ ಶಾಸಕರು ಸಹಯೋಗ ನೀಡಿದ್ದಾರೆ. ಅಧಿಕೃತ ಘೋಷಣೆ ಮಾಡಲು ನನಗೆ ಅವಕಾಶ ಸಿಕ್ಕಿದ್ದು ನನ್ನ ಪೂರ್ವ ಜನ್ಮ ಎಂದು ಯಡಿಯೂರಪ್ಪ ಹೇಳಿದರು .

ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಧ್ಯಯನ ಪೀಠ ಸ್ಥಾಪಿಸಲಾಗುವುದು ಮತ್ತು ಈ ಭಾಗದ ಶ್ರೀಮಂತ ಇತಿಹಾಸವನ್ನು ಪಠ್ಯದಲ್ಲಿ ಸೇರ್ಪಡೆ ‌ಮಾಡಲಾಗುವುದು ಎಂದು ಸಿಎಂ ತಿಳಿಸಿದರು. ಜಿಲ್ಲೆಯ ಶಾಸಕರು, ಸಂಸದರು, ಮಾಜಿ‌ ಶಾಸಕರು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

ಧ್ವಜಾರೋಹಣಕ್ಕೂ ಮೊದಲು ಸರ್ದಾರ್ ವಲ್ಲಭ ಭಾಯ್ ಪಟೇಲ್ ರ ಪುತ್ಥಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಾಲಾರ್ಪಣೆ ಮಾಡಿದರು .

Advertisement

Udayavani is now on Telegram. Click here to join our channel and stay updated with the latest news.

Next