Advertisement

ಪಾಂಗಾಳದಲ್ಲಿ ಪ್ರಯಾಣಿಕರ ತಂಗುದಾಣ ಉದ್ಘಾಟನೆ

03:47 PM Mar 28, 2019 | keerthan |

ಕಟಪಾಡಿ: ಉಡುಪಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಂಗಾಳ ಎಂಬಲ್ಲಿ ನೂತನವಾಗಿ ನಿರ್ಮಿಲಿಸಲ್ಪಟ್ಟ ಎರಡು ಪ್ರಯಾಣಿಕರ ತಂಗುದಾಣವನ್ನು ಮಂಗಳವಾರ ಉದ್ಯಮಿ ಗೋವಿಂದ ಶೆಟ್ಟಿಯವರು ಉದ್ಘಾಟಿಸಿದರು.

Advertisement

ದಿವಂಗತ ಪಿ.ಕೆ. ಸಂಜೀವ ಶೆಟ್ಟಿಯವರ ಸ್ಮರಣಾರ್ಥ ಅವರ ಮಕ್ಕಳು ಈ ತಂಗುದಾಣವನ್ನು ನಿರ್ಮಿಸಿ ಲೋಕಾರ್ಪಣೆ ಮಾಡಿದ್ದಾರೆ. ಈ ಸ್ಥಳದಲ್ಲಿ ರಸ್ತೆ ಅಗಲೀಕರಣದ ವೇಳೆ ತಂಗುದಾಣವನ್ನು ತೆರವುಗೊಳಿಸಲಾಗಿತ್ತು. ಇಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು, ಈಗ ತಂಗುದಾಣ ನಿರ್ಮಾಣವಾಗಿರುವುದು ಸ್ಥಳೀಯರಲ್ಲಿ ಸಂತಸ ಉಂಟುಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next