Advertisement

ಅಥಣಿಯಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಲಕ್ಷ್ಮಣ ಸವದಿ

04:08 PM May 14, 2021 | Team Udayavani |

ಬೆಳಗಾವಿ : ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಅಥಣಿಯಲ್ಲಿ ಆರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಶುಕ್ರವಾರ ಉದ್ಘಾಟನೆ ಗೊಂಡಿತು.

Advertisement

ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಸ್ಥಾಪಿಸಲಾಗಿರುವ 50 ಹಾಸಿಗೆಗಳುಳ್ಳ ಉಚಿತ ಕೋವಿಡ್ ಕೇರ್ ಸೆಂಟರ್ ನ್ನು ಸಚಿವರಾದ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಸಾರ್ವಜನಿಕರ ಸೇವೆಗೆ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಆರ್ ಎಸ್ ಎಸ್ ನ ಪ್ರಾಂತ ಸಂಘ ಚಾಲಕರಾದ ಅರವಿಂದ ದೇಶಪಾಂಡೆ , ಮುಖಂಡರಾದ ಡಾಕ್ಟರ್ ರವೀಂದ್ರ ನಾಯಕ್, ತಾಲೂಕು ವೈದ್ಯಾಧಿಕಾರಿಗಳಾದ ಬಸವರಾಜ್ ಡಂಗಿ, ಬಿಜೆಪಿಯ ಯುವ ಮುಖಂಡ ಚಿದಾನಂದ ಸವದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next