Advertisement

Dandeli: ಬಸ್‌ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ

02:53 PM Jan 18, 2024 | Team Udayavani |

ದಾಂಡೇಲಿ: ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಗುರುವಾರ ಉದ್ಘಾಟಿಸಲಾಯಿತು.

Advertisement

ನೂತನ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅನಂತಮೂರ್ತಿ ಹೆಗಡೆ, ಪ್ರತಿಯೊಬ್ಬನಿಗೂ ಕುಡಿಯುವ ನೀರು ಅತಿ ಅಗತ್ಯವಾಗಿ ಬೇಕಾಗಿದ್ದು, ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅದರಲ್ಲಿಯೂ ಬಡವರಿಗೆ ಹಣ ಕೊಟ್ಟು ಕುಡಿಯುವ ನೀರು ಖರೀದಿಸಲು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಟ್ರಸ್ಟ್ ವತಿಯಿಂದ ಇಲ್ಲಿಯ ಬಸ್ ನಿಲ್ದಾಣಕ್ಕೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಒದಗಿಸಿಕೊಡಲಾಗಿದೆ. ಈಗಾಗಲೆ ಜಿಲ್ಲೆಯಾದ್ಯಂತ ನೂರಕ್ಕೂ ಹೆಚ್ಚು ಶಾಲಾ-ಕಾಲೇಜು ಮತ್ತು ಬಸ್‌ ನಿಲ್ದಾಣ, ಆಸ್ಪತ್ರೆಗಳಿಗೆ ಉಚಿತವಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಮ್ಮ ಟ್ರಸ್ಟ್ ಮೂಲಕ ನೀಡಲಾಗಿದೆ. ಸಮಾಜ ಎಲ್ಲವನ್ನು ನಮಗೆ ಕೊಟ್ಟಾಗ ಸಮಾಜಕ್ಕೆ ನಮ್ಮ ಕೊಡುಗೆ ಕೂಡ ಅತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಈ ಅಳಿಲು ಸೇವೆಯ ಪ್ರಯೋಜನವನ್ನು ಸಾರ್ವಜನಿಕರು, ಪ್ರಯಾಣಿಕರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಸಾರಿಗೆ ಘಟಕದ ವ್ಯವಸ್ಥಾಪಕ ಎಲ್.ಎಚ್.ರಾಥೋಡ್ ಮಾತನಾಡಿ, ಬಸ್ ನಿಲ್ದಾಣಕ್ಕೆ ಅತಿ ಅವಶ್ಯವಾಗಿ ಬೇಕಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕವನ್ನು ಅನಂತಮೂರ್ತಿ ಹೆಗಡೆ ಒದಗಿಸಿ ಕೊಟ್ಟಿದ್ದಾರೆ. ಅವರ ಈ ಸೇವೆಗೆ ಸಾರಿಗೆ ಘಟಕದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಚಾರಿ ನಿರೀಕ್ಷಕ ಲಿಂಗರಾಜು, ಅನಂತಮೂರ್ತಿ‌ ಹೆಗಡೆಯವರ ತಂದೆ ಮಹಾಬಲೇಶ್ವರ ಹೆಗಡೆ, ಟ್ರಸ್ಟಿನ ಸಂತೋಷ್ ನಾಯ್ಕ, ಸ್ಥಳೀಯ ಪ್ರಮುಖರಾದ ಇಲಿಯಾಸ ಕಾಟಿ, ರವಿ‌ ಮಾಳಕರಿ, ಬಶೀರ್ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next