Advertisement

Hubli: ಫೆ.26 ರಂದು ದೇಶದಾದ್ಯಂತ ಅಭಿವೃದ್ಧಿಗೊಳಿಸಿದ ರೈಲು ನಿಲ್ದಾಣಗಳ ಲೋಕಾರ್ಪಣೆ

01:41 PM Feb 25, 2024 | Team Udayavani |

ಹುಬ್ಬಳ್ಳಿ: ಅಮೃತ ಭಾರತ ರೈಲ್ವೆ ಯೋಜನೆಯಡಿ ದೇಶದಾದ್ಯಂತ ಅಭಿವೃದ್ಧಿಗೊಳಿಸಿದ ರೈಲು ನಿಲ್ದಾಣಗಳ ಲೋಕಾರ್ಪಣೆ, ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆಯನ್ನು ಫೆ.26 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚ್ಯುವಲ್ ಮೂಲಕ ನೆರವೇರಿಸಲಿದ್ದು, ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯ 24 ನಿಲ್ದಾಣಗಳ ಶಂಕುಸ್ಥಾಪನೆ ಮಾಡುವರು ಎಂದು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಸಂಜಯ ಕಿಶೋರ ತಿಳಿಸಿದರು.

Advertisement

ಫೆ. 25ರ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಋತ್ಯ ವಲಯ ವ್ಯಾಪ್ತಿಯ ಹುಬ್ಬಳ್ಳಿ-7, ಬೆಂಗಳೂರು-15 ಹಾಗೂ ಮೈಸೂರು ವಿಭಾಗದಲ್ಲಿ -7 ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 801 ಕೋಟಿ ರೂ. ವೆಚ್ಚದಲ್ಲಿ ಈ ನಿಲ್ದಾಣಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ರೈಲ್ವೆ ಮೇಲ್ಸೇತುವೆ ಹಾಗೂ ಕೆಳಸೇತುವೆ ನಿರ್ಮಾಣಕ್ಕೂ ಅಡಿಗಲ್ಲು ನೆರವೇರಿಸುವರು. ಒಟ್ಟು 1192 ಕೋಟಿ ವೆಚ್ಚದಲ್ಲಿ ನಿಲ್ದಾಣಗಳು ಹಾಗೂ ಸೇತುವೆಗಳ ನಿರ್ಮಾಣಕ್ಕೆ ಬಳಸಲಾಗುವುದು ಎಂದು ತಿಳಿಸಿದರು.

ಹುಬ್ಬಳ್ಳಿ- ಬೆಳಗಾವಿ ಹೊಸ ರೈಲು ಮಾರ್ಗಕ್ಕೆ ರೈಲ್ವೆ ಇಲಾಖೆಯು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ‌. ಆದರೆ ರಾಜ್ಯ ಸರಕಾರದಿಂದ ಭೂಸ್ವಾಧಿನ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ‌. ಇದು ತಡವಾಗುತ್ತಿರುವುದು ಟೆಂಡರ್ ಪ್ರಕ್ರಿಯೆ ನಡೆಸಲು ವಿಳಂಬವಾಗುತ್ತಿದೆ. ಈ ಯೋಜ‌ನೆಗೆ ಯಾವುದೇ ಆರ್ಥಿಕ ತೊಂದರೆಯಿಲ್ಲ. ರಾಜ್ಯ ಸರಕಾರ ಎಷ್ಟು ಬೇಗ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಭೂಮಿ ಕೊಡುತ್ತದೆಯೋ ಅಷ್ಟು ಬೇಗ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next