Advertisement

ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ತೀವ್ರ ನಿಗಾ ಘಟಕ ಗೃಹ ಸಚಿವರಿಂದ ಉದ್ಘಾಟನೆ

09:03 AM Aug 09, 2022 | Kavyashree |

ತೀರ್ಥಹಳ್ಳಿ: ತಾಲೂಕಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರಕುತ್ತಿದೆಯಾದರೂ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದ ಕೊರತೆಯಿತ್ತು. ಗೃಹ ಸಚಿವ ಆರಗ ಜ್ಞಾನೇಂದ್ರ ಆಗಾಗ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಬಗ್ಗೆ ವೈದ್ಯರಲ್ಲಿ ಸಮಾಲೋಚಿಸುತ್ತಿದ್ದರು. ಐಸಿಯು ಇಲ್ಲದಿರುವುದು ಮುಖ್ಯ ಸಮಸ್ಯೆಯಾಗಿದ್ದು, ಆಸ್ಪತ್ರೆಗೆ ಬರುವ ಬಡ ರೋಗಿಗಳ ಬಗ್ಗೆ ವಿಶೇಷ ಕಾಳಜಿಯಿಂದ ಸಚಿವ ಜೆಸಿ ಆಸ್ಪತ್ರೆಗೆ ತಮ್ಮ ಅನುದಾನದಲ್ಲಿ ನೂತನವಾಗಿ ಐಸಿಯು ತೀವ್ರ ನಿಗಾ ಘಟಕ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಯು ಮಳೆಯಿಂದ ಸೋರುತ್ತಿದ್ದು ಈ  ಕೊಠಡಿ ಸೋರದಂತೆ ಮೇಲ್ಛಾವಣಿ ಶೀಟ್‌ಗಳನ್ನು ಅಳವಡಿಸಿದ್ದು ಇಂದು ಸಚಿವರಿಂದ ತೀವ್ರ ನಿಗಾ ಘಟಕದ ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ನೆರವೇರಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next