Advertisement

ವಿಜಯಪುರ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

02:29 PM Sep 30, 2022 | keerthan |

ವಿಜಯಪುರ: ನಗರದಲ್ಲಿ ಶುಕ್ರವಾರ ಜರುಗಿದ ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳಿಗೆ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಸಾನ್ನಿಧ್ಯದಲ್ಲಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ಹಾಗೂ ವಿಜಯಪುರ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

Advertisement

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಪ್ರವಾಸೋದ್ಯಮ ಸಚಿವ ಆನಂದಸಿಂಗ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಶಾಸಕರಾದ ಬಾಗಲಕೋಟೆ ವೀರಣ್ಣ ಚರಂತಿಮಠ, ಸಿಂದಗಿ ರಮೇಶ ಭೂಸನೂರ, ವೂಡಾ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿ.ಪಂ. ಸಿಇಓ ರಾಹುಲ್ ಶಿಂಧೆ, ಎಸ್ಪಿ ಆನಂದಕುಮಾರ, ಎಡಿಸಿ ರಮೇಶ ಕಳಸದ, ಬಿಜೆಪಿ ಜಿಲ್ಲಾಧ್ಯಕ್ಷ ಅರ್.ಎಸ್.ಪಾಟೀಲ ಕೂಚಬಾಳ, ಅಪ್ಪುಗೌಡ ಪಾಟೀಲ ಮನಗೂಳಿ ಇತರರು ಉಪಸ್ಥಿತರಿದ್ದರು.

ಇದೇವೇಳೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ರಮೇಶ ಕತ್ತಿ ಅವರ ನಿಧನಕ್ಕೆ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಹುಮಾಯೂನ್‌ ಮಮದಾಪೂರ, ರಾಜಶೇಖರ ದೈವಾಡಿ ನಿರೂಪಿಸಿದರು. ಸಂಗೀತ ಕಲಾವಿದರಾದ ವೀರೇಶ ವಾಲಿ, ಶ್ರೀಮಂತ ಅವಟಿ ನಾಡಗೀತೆ ಹಾಗೂ ರೈತಗೀತೆ ಹಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next