Advertisement

ಶುದ್ದ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

02:47 PM Jan 29, 2022 | Team Udayavani |

ಶಹಾಪುರ: ನಾಗರಿಕರಿಗೆ ಶುದ್ಧ ಕುಡಿ ಯುವ ನೀರಿನ ಸೌಲಭ್ಯ ಅಗತ್ಯವಿದೆ. ಆ ನಿಟ್ಟಿನಲ್ಲಿ ವಾರ್ಡ್‌ 7ರಲ್ಲಿ ಅಂದಾಜು 15 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ವ್ಯವಸ್ಥೆ ಮಾಡಲಾಗಿದೆ. ಸರ್ವರೂ ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಶರಣ ಬಸಪ್ಪಗೌಡ ದರ್ಶನಾಪುರ ಹೇಳಿದರು.

Advertisement

2019-20ನೇ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಯೋಜನೆಯಡಿ ವಾರ್ಡ್‌ ಸಂಖ್ಯೆ 7ರಲ್ಲಿ 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರದ ಪ್ರತಿಯೊಂದು ಬಡಾವಣೆ ಗಳಲ್ಲಿಯೂ ಅಗತ್ಯತೆಗನುಗುಣವಾಗಿ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದ್ದು, ಈಗಾಗಲೇ ಹಲವು ಬಡಾವಣೆಗಳಲ್ಲಿ ನೀರಿನ ಟ್ಯಾಂಕ್‌ ನಿರ್ಮಾಣ, ಪೈಪ್‌ಲೈನ್‌ ಜೋಡಣೆ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಪ್ರಮುಖರಾದ ಸುರೇಂದ್ರ ಪಾಟೀಲ ಮಡ್ನಾಳ, ಗುಂಡಪ್ಪ ತುಂಬಗಿ, ನಗರಸಭೆ ಸದಸ್ಯ ಬಾಬಾ ಪಟೇಲ್‌, ಸಿದ್ದು ಆರಬೋಳ, ರಾಜುಗೌಡ ಮಡ್ನಾಳ ಮತ್ತು ಪಾಶಾ ಪಟೇಲ್‌, ರಫೀಕ್‌ ಚೌದ್ರಿ, ಸಯ್ಯದ್‌ ಸಾ ಕ್‌ ಶೇಖ್‌, ಶೇಖ್‌ ಕಲೀಮ್‌, ಮಹಾದೇವಪ್ಪ ಸಾಲಿಮನಿ, ಸಣ್ಣ ನಿಂಗಣ್ಣ ನಾಯ್ಕೋಡಿ, ಅನಿಲ ಬಡಿಗೇರ, ಮಲ್ಲಿಕಾರ್ಜುನ ಬಡಿಗೇರ, ಇಸ್ಮಾಯಿಲ್‌, ಪ್ರೇಮನಾಥ ಶೆಟ್ಟಿ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next