Advertisement

ಬಜಪೆ : ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ

04:14 PM Apr 24, 2021 | Team Udayavani |

ಬಜಪೆ : ಸುರತ್ಕಲ್ ಸಮೀಪದ ಕಳವಾರ ನಲ್ಲಿರುವ ಕ್ಯಾಟಸೆಂತ್ ಕೆಮಿಕಲ್  ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.

Advertisement

ಹೊಸದಾಗಿ ನಿರ್ಮಾಣಗೊಂಡ ಕಂಪೆನಿ ಇದಾಗಿದ್ದು, ಇಲ್ಲಿನ ಕೆಮಿಕಲ್ಸ್ ಗಳಿಗೆ ಮಧ್ಯಾಹ್ನ 1:30 ಸಮಾರಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕ್ಯಾಟಸೆಂತ್ ಫ್ಯಾಕ್ಟರಿಯ 4 ನೇ ಪ್ಲ್ಯಾಂಟ್ ನ 2 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಲ್ಲಿ ವೆಲ್ಡಿಂಗ್ ಕಾರ್ಯ ನಡೆಯುತಿತ್ತು ಎನ್ನಲಾಗಿದೆ.

ಲಾಕ್ ಡೌನ್ ಹಿನ್ನಲೆಯಲ್ಲಿ ಬಹುತೇಕ ನೌಕರರು ಗೈರು ಹಾಜರಾಗಿದ್ದರು. ಆ ಕಾರಣ ಪ್ರಾಣ ಹಾನಿ ತಪ್ಪಿದೆ ಎಂದು ಮೂಲಗಳು ತಿಳಿಸಿವೆ. ಕಂಪೆನಿ ಬಹುತೇಕ ಬೆಂಕಿಯಿಂದ ನಷ್ಟ ಹೊಂದಿದೆ ಎಂದು ತಿಳಿದು ಬಂದಿದೆ.

ಬೆಂಕಿಯಿಂದ ಸುರತ್ಕಲ್ ಭಾಗದಲ್ಲಿ ದಟ್ಟ ಹೊಗೆ ಆವರಿಸಿದೆ. ಸುರತ್ಕಲ್ ಎಮ್ ಆರ್ ಪಿಎಲ್ ಅಗ್ನಿಶಾಮಕ ದಳದಿಂದ ಕಾರ್ಯಚರಣೆ ನಡೆಯುತ್ತಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next