Advertisement

ಕೆಲಸ ಮಾಡುವ ವೇಳೆ ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

04:33 PM Jun 14, 2021 | Team Udayavani |

ಬಂಟ್ಚಾಳ:ಕೆಲಸ ಮಾಡುತ್ತಿದ್ದ ವೇಳೆ ಮನೆಯ  ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟ ಘಟನೆ ಸೋಮವಾರ ನಡೆದಿದೆ..

Advertisement

ಮಂಚಿ ಚೌಕದ ಪಾಲು ರಾಜೇಶ್ (36) ಮೃತಪಟ್ಟ ವ್ಯಕ್ತಿ. ಎರಡು ವರ್ಷಗಳ ಹಿಂದೆಯಷ್ಟೆ ರಾಜೇಶ್  ಮದುವೆಯಾಗಿದ್ದು ಮನೆಯ ಆಧಾರಸ್ತಂಭವಾಗಿದ್ದರು.

ಜೂನ್ 8 ರಂದು ರಾಜೇಶ್ ಅವರು ಪಕ್ಕದ ಮನೆಯವರ ಮಹಡಿ ಮೇಲೆ ಇಟ್ಟಿಗೆ ಕಟ್ಟುತ್ತಿದ್ದ ವೇಳೆ  ಕಾಂಕ್ರೀಟ್ ಮೆಲ್ಚಾವಣಿಯಿಂದ ಅಕಸ್ಮಾತ್ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದರು. ನೆಲಕ್ಕೆ ಬಿದ್ದ ರಾಜೇಶ್ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ಓದಿ: ಬಂಟ್ವಾಳ: ಕಾಲೇಜು ಯುವತಿಗೆ ಚಿಕ್ಕಪ್ಪನಿಂದಲೇ ನಿರಂತರ ದೈಹಿಕ ಅತ್ಯಾಚಾರ

ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗ್ರಾಮಾಂತರ ಪೋಲೀಸ್ ಠಾಣೆಯ ಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next