Advertisement

ಪಾಣೆಮಂಗಳೂರು ಸೇತುವೆಯ ಬಳಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ: ನದಿಗೆ ಹಾರಿರುವ ಶಂಕೆ

10:55 PM Jul 28, 2021 | Team Udayavani |

ಬಂಟ್ವಾಳ: ಬೆಂಗಳೂರು ಮೂಲದ ವ್ಯಕ್ತಿಯೋರ್ವ ಪಾಣೆಮಂಗಳೂರು ಸೇತುವೆಯ ಬೈಕನ್ನು ನಿಲ್ಲಿಸಿ ನಾಪತ್ತೆಯಾದ ಘಟನೆ ಬುಧವಾರ ನಡೆದಿದ್ದು, ನದಿಗೆ ಹಾರಿರುವ ಸಂಶಯ ವ್ಯಕ್ತವಾಗಿದೆ.

Advertisement

ಬೆಂಗಳೂರು ದಾಸರಹಳ್ಳಿ ಮೂಲದ ಸತ್ಯವೇಲು(29) ನಾಪತ್ತೆಯಾದ ಯುವಕ. ವಿಶೇಷವೆಂದರೆ ಈತ ಸುಮಾರು 15 ದಿನಗಳ ಹಿಂದೆ ಇದೇ ರೀತಿ ನದಿಗೆ ಹಾರುವುದಕ್ಕೆ ಬೆಂಗಳೂರಿನಿಂದ ಪಾಣೆಮಂಗಳೂರಿಗೆ ಆಗಮಿಸಿದ್ದ. ಆದರೆ ಸ್ಥಳೀಯರು ಆತನನ್ನು ರಕ್ಷಿಸಿ ದ್ದು, ಬಳಿಕ ಬಂಟ್ವಾಳ ನಗರ ಪೊಲೀಸರು ಆತನ ಪೋಷಕರನ್ನು ಕರೆಸಿ ಕಳುಹಿಸಿಕೊಟ್ಟಿದ್ದರು.

ಇದನ್ನೂ ಓದಿ: ಕೈದಿಗಳಿಂದ ಮೊಬೈಲ್‌ನಲ್ಲಿ ಕೋರ್ಟ್‌ ಕಲಾಪ ವೀಕ್ಷಣೆ ತನಿಖೆಗೆ ವಿಶೇಷ ತಂಡ ರಚನೆ: ಹೈಕೋರ್ಟ್‌

ಆತನ‌ ಬೈಕ್ ಬುಧವಾರ ಮುಂಜಾನೆ 4:30 ಸುಮಾರಿಗೆ ಪಾಣೆಮಂಗಳೂರು ಸೇತುವೆಯ ಮೇಲೆ ಮತ್ತೆ ಪ್ರತ್ಯಕ್ಷವಾಗಿದ್ದು, ಬೈಕ್ ಸ್ಟಾರ್ಟ್ ನಲ್ಲೇ ಇತ್ತು ಎನ್ನಲಾಗಿದೆ. ಬಳಿಕ ಯಾರೋ ಪೊಲೀಸರಿಗೆ ಮಾಹಿತಿ ನೀಡಿದ್ದು, ಬೈಕನ್ನು ಠಾಣೆಗೆ ತಂದಿದ್ದಾರೆ.

ಜು. 17ರಂದು ತಾಯಿಯಿಂದ ಪೆಟ್ರೋಲ್ ಹಾಕುವುದಕ್ಕೆ 200 ರೂ. ಪಡೆದು ಕೆಲಸಕ್ಕೆಂದು ತೆರಳಿದ್ದನು. ಆದರೆ ಕೆಲಸಕ್ಕೆ ಹೋಗದೇ ಇದ್ದು, ರಾತ್ರಿ‌ 11ರ ಸುಮಾರಿಗೆ ತಾಯಿಗೆ ಕರೆ ಮಾಡಿ ಸ್ನೇಹಿತನ ಮನೆಯಲ್ಲಿರುವುದಾಗಿ‌ ತಿಳಿಸಿದ್ದಾನೆ.

Advertisement

ಆತ ಮೊಬೈಲ್ ಆನ್ಲೈನ್ ಗೇಮ್ ಮೂಲಕ ಸಾಕಷ್ಟು ಹಣ ಕಳೆದುಕೊಂಡಿದ್ದು, ಹೀಗಾಗಿ ಆತ ಈ ರೀತಿ ವರ್ತಿಸುತ್ತಿದ್ದಾನೆ ಎಂದು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತನ ನಾಪತ್ತೆಯ ಕುರಿತು ಬೆಂಗಳೂರಿನ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಂಟ್ವಾಳ ನಗರ ಪೊಲೀಸರು ತಿಳಿಸಿದ್ದಾರೆ. ‌

Advertisement

Udayavani is now on Telegram. Click here to join our channel and stay updated with the latest news.

Next