Advertisement

ಸಲಿಂಗ ಕಾಮಕ್ಕೆ ಜಗಳ: ಕೊಲೆಯಲ್ಲಿ ಅಂತ್ಯ

12:29 PM Jun 11, 2022 | Team Udayavani |

ಬೆಂಗಳೂರು: ಸಲಿಂಗ ಕಾಮದ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಡಿವಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಘಟನೆ ಸಂಬಂಧ ಮೂಡಲಪಾಳ್ಯ ನಿವಾಸಿ ಆಟೋ ಚಾಲಕ ರಕ್ಷಿತ್‌ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಡಿವಾಳದ ಕ್ಯಾಷಿಯರ್‌ ಲೇಔಟ್‌ ನಿವಾಸಿ ಪ್ರದೀಪ್‌ ಕೊಲೆಯಾದಯುವಕ. ಇತ್ತೀಚೆಗೆ ಪ್ರದೀಪ್‌ ನನ್ನು ಆತನ ಮನೆಯಲ್ಲಿಯೇ ಕೊಲೆ ಮಾಡಿ ಪರಾರಿಯಾಗಿದ್ದ. ನಾಲ್ಕು ದಿನಗಳ ಬಳಿಕ ಮನೆಯಲ್ಲಿ ಕೊಳೆತ ಶವದ ವಾಸನೆ ಬರುತ್ತಿದ್ದರಿಂದ ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದರು.

ಸ್ಥಳಕ್ಕೆ ಬಂದ ಪೊಲೀಸರು ಮನೆ ಬೀಗ ಒಡೆದು ಒಳಹೋದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದಾಗ ಕೃತ್ಯದ ಹಿಂದೆ ರಕ್ಷಿತ್‌ ಭಾಗಿಯಾಗಿರುವುದು ಬೆಳಕಿಗೆ ಬಂದಿತ್ತು. ಆತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಸಲಿಂಗ ಕಾಮಕ್ಕೆ ಆತ ಕೊಲೆಯಾಗಿರುವ ಮಾಹಿತಿ ಬೆಳಕಿಗೆ ಬಂದಿದೆ.

ಇನ್ನು ಪ್ರದೀಪ್‌ ಪುರುಷನಾದರೂ ಕೂಡ ಮಹಿಳೆಯಂತೆ ವೇಷಭೂಷಣ ಧರಿಸುತ್ತಿದ್ದ ಎನ್ನುವ ಮಾಹಿತಿಯೂ ಗೊತ್ತಾಗಿದ್ದು, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next