Advertisement

ಪತ್ನಿಯ ಕೊಲ್ಲಲು ಹೋಗಿ ಕುಡಿದ ಮತ್ತಿನಲ್ಲಿ ಅತ್ತೆಯನ್ನೇ ಕೊಂದ!

12:32 PM Jul 20, 2022 | Team Udayavani |

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಅತ್ತೆಯನ್ನು ಕೊಲೆಗೈದಿದ್ದ ಅಳಿಯನನ್ನು ಎಚ್‌ಎಎಲ್‌ ಪೊಲೀಸರು ಬಂಧಿಸಿದ್ದಾರೆ.

Advertisement

ಹೊಸಕೋಟೆಯ ನಡವಟ್ಟಿ ಗ್ರಾಮದ ನಿವಾಸಿ ನಾಗರಾಜ(35) ಬಂಧಿತ. ಸೌಭಾಗ್ಯ(45) ಕೊಲೆಯಾದ ಮಹಿಳೆ.

ಈತ ತನ್ನ ಪತ್ನಿಯನ್ನು ಕೊಲ್ಲುವ ಉದ್ದೇಶ ಹೊಂದಿದ್ದ. ಆದರೆ, ಕುಡಿದ ಮತ್ತಿನಲ್ಲಿ ಪತ್ನಿ ಬದಲು ಅತ್ತೆಯನ್ನು ಕೊಲೆಗೈದಿದ್ದಾನೆ.

ಕ್ಯಾಬ್‌ ಚಾಲಕನಾಗಿರುವ ನಾಗರಾಜು 6 ವರ್ಷಗಳ ಸೌಭಾಗ್ಯರ ಪುತ್ರಿ ಭವ್ಯರನ್ನು ಮದುವೆಯಾಗಿದ್ದು, ದಂಪತಿಗೆ 5 ವರ್ಷದ ಮಗಳು ಇದ್ದಾಳೆ. ಮದ್ಯ ವ್ಯಸನಿಯಾಗಿರುವ ಆರೋಪಿ, ಸಣ್ಣ ವಿಚಾರಗಳಿಗೆ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಅದರಿಂದ ಬೇಸತ್ತ ಭವ್ಯ ತನ್ನ ಪುತ್ರಿ ಜತೆ ತವರು ಮನೆಗೆ ಹೋಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದರು. ಈ ನಡುವೆ ವಿವಾಹ ವಿಚ್ಛೇದನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಈ ವಿಚಾರ ತಿಳಿದ ನಾಗರಾಜ, ಅತ್ತೆ ಮನೆಗೆ ಬಂದು ಪತ್ನಿ ಮತ್ತು ಮಗಳನ್ನು ತನ್ನೊಂದಿಗೆ ಕಳುಹಿಸುವಂತೆ ಗಲಾಟೆ ಮಾಡುತ್ತಿದ್ದ. ಆದರೆ, ಅತ್ತೆ ಸೌಭಾಗ್ಯ ಕಳುಹಿಸಲು ನಿರಾಕರಿಸಿದ್ದರು. ಅದರಿಂದ ಆಕ್ರೋಶಗೊಂಡಿದ್ದ ಆರೋಪಿ ಜು.12ರಂದು ಅತ್ತೆ ಮನೆಗೆ ಬಂದು ಗಲಾಟೆ ಮಾಡಿ ಹೊರಟು ಹೋಗಿದ್ದ. ಮಂಜುನಾಥನಗರದ ಆಟೋನಿಲ್ದಾಣದ ಬಳಿಯ ತರಕಾರಿಮಾರುಕಟ್ಟೆಯಲ್ಲಿ ಸೌಭಾಗ್ಯ ತರಕಾರಿ ವ್ಯಾಪಾರ ಮಾಡುತ್ತಾರೆ. ಜು.13ರಂದು ಸಂಜೆ 7.30ಕ್ಕೆ ತರಕಾರಿ ಅಂಗಡಿ ಬಳಿ ಬಂದು ಸೌಭಾಗ್ಯರಿಗೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ. ತೀವ್ರ ಗಾಯಗೊಂಡಿದ್ದ ಸೌಭಾಗ್ಯ ಚಿಕಿತ್ಸೆ ಫ‌ಲಿಸದೇ ಮೃತಪಟ್ಟಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ವಿಚಾರಣೆ ವೇಳೆ “ಅತ್ತೆ ಸೌಭಾಗ್ಯರನ್ನು ಕೊಲ್ಲುವ ಉದ್ದೇಶ ಇರಲಿಲ್ಲ. ಪತ್ನಿಯನ್ನು ಕೊಲ್ಲಲು ನಿರ್ಧರಿಸಿದ್ದೆ. ಕುಡಿದ ಮತ್ತಿನಲ್ಲಿ ಅತ್ತೆಯನ್ನು ಹೊಡೆದು ಕೊಂದು ಬಿಟ್ಟೆ’ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next