Advertisement

ಕ್ಷುಲ್ಲಕ ಕಾರಣಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

09:29 PM Jan 09, 2021 | Team Udayavani |

ಚಾಮರಾಜನಗರ: ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆದು ಓರ್ವನ ಕೊಲೆಯಲ್ಲಿ ಕೊನೆಗೊಂಡ ಘಟನೆ ತಾಲೂಕಿನ ಭುಜಗನಪುರದಲ್ಲಿ ಶುಕ್ರವಾರ ಸಂಜೆ ನಡೆದಿದೆ.

Advertisement

ಗ್ರಾಮದ ನಿವಾಸಿ ಗುರುಸಿದ್ದಯ್ಯ (65) ಕೊಲೆಯಾದವರು. ಅವರ ನೆರೆಮನೆಯವರಾದ ನಾರಾಯಣಸ್ವಾಮಿ, ಚಂದ್ರಕಾಂತ್ ಮತ್ತು ಭೀಮ ಎಂಬುವವರ ವಿರುದ್ಧ ದೂರು ದಾಖಲಾಗಿದ್ದು, ಮೂವರು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಗುರುಸಿದ್ದಯ್ಯ ಹಾಗೂ ನೆರೆಮನೆಯವರ ನಡುವೆ ಶುಕ್ರವಾರ ಸಂಜೆ ಜಗಳವಾಗಿತ್ತು. ನೂಕಾಟ, ತಳ್ಳಾಟದಲ್ಲಿ ಗುರುಸಿದ್ದಯ್ಯ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ : ಚಾಮರಾಜನಗರ: ಸಾಲ ಬಾಧೆ ತಾಳದೆ ರೈತ ಆತ್ಮಹತ್ಯೆ

Advertisement
Advertisement

Udayavani is now on Telegram. Click here to join our channel and stay updated with the latest news.

Next