Advertisement

ಚಿತ್ರದುರ್ಗ: ಬೈಕ್ ಗೆ ಖಾಸಗಿ ಬಸ್ ಢಿಕ್ಕಿ; ಒಂದೇ ಕುಟುಂಬದ ನಾಲ್ವರ ದುರ್ಮರಣ

09:47 AM Mar 24, 2022 | Team Udayavani |

ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ಬೈಕ್ ಗೆ ಖಾಸಗಿ ಬಸ್ ಢಿಕ್ಕಿಯಾಗಿ ನಾಲ್ವರು ದಾರುಣವಾಗಿ ಮೃತಪಟ್ಟಿರುವ ಭೀಕರ ಅವಘಡ ಬುಧವಾರ ತಡರಾತ್ರಿ ನಡೆದಿದೆ.

Advertisement

ಘಟನೆಯಲ್ಲಿ ಬೈಕಿನಲ್ಲಿದ್ದ ದಂಪತಿ, ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ  ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಿ.ದುರ್ಗ ಗ್ರಾಮದ ನಾಗರಾಜ್(43), ಪತ್ನಿ ಶೈಲಜಾ(38), ಪುತ್ರ ವೀರೇಶ್(15), ಸಂತೋಷ(13) ಮೃತ ದುರ್ದೈವಿಗಳು . ಹೆಬ್ಬಳಗೆರೆ ಗ್ರಾಮದಿಂದ ಬೈಕಿನಲ್ಲಿ ಬಿ.ದುರ್ಗ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಆರೋಪಿಸಲಾಗಿದೆ. ಏಕಾಏಕಿ ಬಲಬದಿಗೆ ಬಸ್ ನುಗ್ಗಿದ ಪರಿಣಾಮ ಅವಘಡ ಸಂಭವಿಸಿದೆ. ದುಮ್ಮಿ ಗ್ರಾಮದ ಬಳಿ ತಡರಾತ್ರಿ ವೇಳೆ ಈ ಘಟನೆ ನಡೆದಿದೆ. ಘಟನೆ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next