Advertisement

ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬಲಿ

01:53 PM Nov 29, 2022 | Team Udayavani |

ದೊಡ್ಡಬಳ್ಳಾಪುರ: ತಾಲೂಕಿನ ಹುಲಿಕುಂಟೆ ಸಮೀಪ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

Advertisement

ನೆಲಮಂಗಲ ತಾಲೂಕಿನ ಮರಳುಕುಂಟೆ ಗ್ರಾಮದ ನಿವಾಸಿಗಳಾದ ಮಹೇಶ್‌ (27) ಹಾಗು ಮಾರುತಿ (24) ದುರ್ದೈವಿಗಳು.

ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ತಕ್ಷಣ ಬಿಬಿಎಂಪಿ ಕಸದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದನ್ನು ಗಮನಿಸಿದ ಸ್ಥಳೀಯರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ವೇಳೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಅಪಘಾತ ನಡೆದ ಸ್ಥಳಕ್ಕೆ ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್‌ ಮೋಹನ ಕುಮಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಮಲ್ಲಿ ಕಾರ್ಜುನ ಬಾಲದಂಡಿ ಭೇಟಿ ನೀಡಿದ್ದು ಉದ್ವಿಗ್ನ ಜನರನ್ನು ಸಮಾಧಾನ ಪಡಿಸಿದ್ದಾರೆ.

ಬೆಂಗಳೂರು ವ್ಯಾಪ್ತಿಯಿಂದ ಕಸ ತುಂಬಿದ ಸುಮಾರು 150 ಲಾರಿಗಳು ಹುಲಿಕುಂಟೆ ಸಮೀ ಪದ ಚಿಗರೇನಹಳ್ಳಿಯ ಕಸ ವಿಲೇವಾರಿ ಘಟಕಕ್ಕೆ ಪ್ರತಿದಿನವು ಬರುತ್ತವೆ. ಸೆಪ್ಟೆಂಬರ್‌ 4 ರಂದು ಸಹ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಮಾವಿನ ಕುಂಟೆ ನಿವಾಸಿ ರಾಜು (28) ಎಂಬಾತ ಮೃತ ಪಟ್ಟಿದ್ದ. ಈ ಘಟನೆ ಮಾಸುವ ಮುನ್ನವೇ ಇಬ್ಬರು ಬಲಿಯಾಗಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡು ವವರೆಗೂ ಮೃತ ದೇಹಗಳನ್ನು ತೆರವು ಮಾಡುವು ದಿಲ್ಲ, ಬಿಬಿಎಂಪಿ ಕಸದ ಲಾರಿಗಳು ಈ ಕಡೆಗೆ ಬರಲು ಬಿಡುವುದಿಲ್ಲ ಎಂದು ಸ್ಥಳೀಯರು ಶಾಸಕ ಟಿ.ವೆಂಕಟರಮಣಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ಮುಂಜಾಗ್ರತಾ ಕ್ರಮ ವಾಗಿ ಪೊಲೀಸ್‌ ಬಂದೋಬಸ್ಟ್‌ ಹಾಕಲಾಗಿದೆ. ದಾಬಸ್‌ ಪೇಟೆ ಕಡೆಯಿಂದ ದೊಡ್ಡಬಳ್ಳಾಪುರದ ಕಡೆಗೆ ಬರುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next